ರಾಷ್ಟ್ರೀಯ

ವ್ಯಕ್ತಿಯ ಸಾಧನೆಗೆ ತಾಯಿಯ ಆಶೀರ್ವಾದದ ಬಲ ಬೇಕು :ಜಶೋದಾ ಬೆನ್ ಮೋದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೊಸನಗರ : ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶಂಕರಾಚಾರ್ಯರಿಗೆ ತಾಯಿಯ ಆಶೀರ್ವದ ಬಲ ವಿಶೇಷವಾಗಿತ್ತು. ಪ್ರತಿಯೊಬ್ಬರು ಇದನ್ನು ಗಮನಿಸಿಬೇಕಿದೆ, ಎಲ್ಲಿ ಆಧ್ಮಾತ್ಮಿಕ ಒಲವು ಇದೆಯೋ ಅಲ್ಲಿ ದೈವೀ ಬಲ ಇರಲಿದೆ ಎಂದು ಜಶೋದಾ ಬೆನ್ ಮೋದಿ ಹೇಳಿದರು.

Advertisement

ರಾಮಚಂದ್ರಾಪುರಮಠದ ಮಹಾನಂದಿ ಗೋಲೋಕದ ಆವರಣದಲ್ಲಿರುವ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ಬುಧವಾರ ನಡೆದ ಕೋಟಿ ವಿಷ್ಣು ಸಹಸ್ರನಾಮ ಪಠಣ ಸಮರ್ಪಣೆ, ಸಹಸ್ರ ಛತ್ರ ಮೆರವಣಿಗೆ, ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಛತ್ರ ಸಮರ್ಪಣೆ, ಸೋಪಾನಮಾಲೆ ನಿರ್ಮಾಣಕ್ಕೆ ಶಿಲಾನ್ಯಾಸ, ಗೋ ಬಂಧಮುಕ್ತಿ, ಗೋಶಾಲೆ ಲೋಕಾರ್ಪಣೆ, ಗೋ ಆಸ್ಪತ್ರೆ ಉದ್ಘಾಟನೆ, ಗೋ ಮ್ಯೂಸಿಯಂ ಲೋಕಾರ್ಪಣೆಯ ಕೃಷ್ಣಾರ್ಪಣ್ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಶಂಕರಾಚಾರ್ಯರ ಸಾಧನೆಗಳನ್ನು ಮತ್ತೆ ನೆನಪಿಸುವ ರೀತಿಯಲ್ಲಿ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಶ್ರೀಗಳು ಕಾರ್ಯ ಮಾಡುತ್ತಿರುವುದು ಸಂತೋಷದ ಸಂಗತಿ. ಅದೇ ಉದ್ದೇಶಕ್ಕೆ ದೂರದ ಗುಜರಾತಿನಿಂದ ಕರ್ನಾಟಕದ ಈ ತುದಿಯವರೆಗೆ ಪಯಣ ಬೆಳೆಸಿದ ನಾವು ಇಲ್ಲಿ ಗೋವರ್ಧನ ಗಿರಿಧಾರಿ ಶ್ರೀ ಕೃಷ್ಣನ ದೇವಾಲಯದ ಸುಂದರ ವಾತಾವರಣದಲ್ಲಿ ಮತ್ತೆ ಶಂಕರಾಚಾರ್ಯರಿಂದ ಆಶೀರ್ವಾದ ಪಡೆಯುತ್ತಿರುವುದು ನಮ್ಮ ಪುಣ್ಯ ವಿಶೇಷ, ನಿಜಕ್ಕೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ ಭಕ್ತರ ನಡುವೆ ವೈಯಕ್ತಿಕವಾದ ಪ್ರಾರ್ಥನೆಯನ್ನು ದೇವರಲ್ಲಿ ಸಮರ್ಪಿಸುತ್ತಿರುವ ಈ ಕ್ಷಣ ನನ್ನ ಪಾಲಿಗೆ ಧನ್ಯತೆಯ ಕ್ಷಣ ಎಂದರು. ದೇಶ ಸುಭಿಕ್ಷೆ ಮತ್ತು ಸಮೃದ್ದಿಯಿಂದ ಇರಬೇಕಾದರೆ ಒಳ್ಳೆಯ ಮನಸ್ಸುಗಳಿಂದ ಇಲ್ಲಿರುವ ದೇವಶಕ್ತಿಗಳಲ್ಲಿ ಪ್ರಾರ್ಥಿಸಬೇಕು ಎಂದ ಅವರು ಸಮಷ್ಠಿಯ ಪ್ರಾರ್ಥನೆಯ ಫಲವಾಗಿ ಇಂದು ರಾಮಮಂದಿರವೂ ನಿರ್ಮಾಣವಾಗುತ್ತಿದೆ ಅದು ದೇಶ ಒಳ್ಳೆಯ ದಾರಿಯತ್ತ ಸಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.  ಇದೇ ವೇಳೆ ಇಲ್ಲಿಯ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ರಜತ ಛತ್ರ ಸಮರ್ಪಣೆ ಮೂಲಕ ತಮ್ಮ ವೈಯಕ್ತಿಕ ಹರಕೆಯನ್ನು ತೀರಿಸಿದರು.

Advertisement

ದಿವ್ಯಸಾನ್ನಿಧ್ಯ ವಹಿಸಿದ್ದ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿ, ತ್ಯಾಗದ ಜೀವನದಿಂದ ಮಾತ್ರ ದೇಶಕ್ಕೆ ಒಳಿತಿದೆ ಎನ್ನುವುದನ್ನು ಕಂಡುಕೊಂಡ ದೇಶ ನಮ್ಮ ಭಾರತ. ಅಂತಹ ಹಿರಿಮೆ ಇರುವ ನಮ್ಮ ದೇಶದಲ್ಲಿ ಪತಿಯ ಸಾಧನೆಯ ಹಿಂದೆ ಪತ್ನಿಯ ಪುಣ್ಯ ಇರುತ್ತದೆ ಎಂಬ ಸತ್ಯವನ್ನು ಯಾರೂ ಮರೆಯುವಂತ್ತಿಲ್ಲ ಎಂದರು. ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದ ಪರಿಸರ ಗೋಸಂರಕ್ಷಣೆಯ ಅಡಿಶಿಲೆ. ಗೋಸ್ವರ್ಗ ಎನ್ನುವುದು ಶಿಖರ. ಅಡಿಶಿಲೆ ಅತ್ಯಂತ ದೃಡವಾಗಿದ್ದಾಗ ಶಿಖರ ಶೋಭಿಸಲಿದೆ ಇದಕ್ಕೆ ಪೂರಕವಾಗಿ ಇಲ್ಲಿ ಜಗತ್ತು ಗುರುತಿಸುವ ರೀತಿಯಲ್ಲಿ 31 ಭಾರತೀಯ ದೇಶೀಯ ಗೋತಳಿಗಳು ಇದೆ . ಇಂದಿನಿಂದ ಈ ಪರಿಸರ ವಿಷ್ಣು ಸಹಸ್ರನಾಮ ಸುಕ್ಷೇತ್ರ ಎನಿಸಿಕೊಂಡಿದೆ. ಇದಕ್ಕೆ ಕಾರಣವಾಗಿರುವವರು ಕೃಷ್ಣನೂ ಹೌದು..ಪಾರ್ಥ ಸಾರಥಿಯೂ ಹೌದು ಎಂದರು.

Advertisement

ಇದೇ ವೇಳೆ ಗೋ ಮ್ಯೂಸಿಯಂಗೆ ಕಾರಣಕರ್ತರಾಗಿರುವ ಕೃಷ್ಣರಾಜ್ ಅರಸ್‍ರವರಿಗೆ ಕೃಷ್ಣಾನುಗ್ರಹ ಪ್ರದಾನ ಮಾಡಲಾಯಿತು. ವಿಷ್ಣು ಸಹಸ್ರನಾಮ ಪಠಣ ನೇತೃತ್ವವಹಿಸಿದ್ದ ಅರಳುಮಲ್ಲಿಗೆ ಪಾರ್ಥಸಾರಥಿ, ಪಟ್ಟಣಗೆರೆ ಶ್ರೀವಿಜಯದುರ್ಗ ಪರಮೇಶ್ವರಿ ಶ್ರೀ ಸನ್ನೀಧಾನದ ದಿನೇಶ್ ಗುರೂಜಿ, ಎಂಆರ್‍ಪಿಎಲ್ ಜನರಲ್ ಮ್ಯಾನೇಜರ್ ಜಯರಾಂ ಭಟ್, ಉದ್ಯಮಿಗಳಾದ ರಾಘವೇಂದ್ರ, ಜಿ.ಎಂ. ಹೆಗಡೆ, ಜಿ.ವಿ. ಹೆಗಡೆ, ಬಿ. ರವಿ,ಎನ್.ಎಚ್. ಇಲ್ಲೂರು, ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್. ಹೆಗಡೆ, ಮಹಾನಂದಿ ಗೋಲೋಕದ ಡಾ. ಸೀತಾರಾಮ ಪ್ರಸಾದ್, ಬರುವೆ ಸುಬ್ಬಣ್ಣ ಇದ್ದರು. ರಮೇಶ್ ಹೆಗಡೆ ಗುಂಡೂಮನೆ ನಿರೂಪಿಸಿದರು.

ಅರಳು ಮಲ್ಲಿಗೆ ಪಾರ್ಥಸಾರಥಿಯವರ ಹರಿದಾಸ ಹಾಡುಗಳ ಪುಸ್ತಕವನ್ನು ಇದೇ ವೇಳೆ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಲೋಕಾರ್ಪಣೆ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

3 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

3 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

4 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

14 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago