ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.
ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್ರೆಡ್ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.
ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.
ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್ರೆಡ್ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…