ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.
ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್ರೆಡ್ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.
ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.
ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್ರೆಡ್ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…