ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.
ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್ರೆಡ್ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.
ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.
ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್ರೆಡ್ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…