ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.
ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್ರೆಡ್ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.
ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.
ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್ರೆಡ್ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…