ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.
ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್ರೆಡ್ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.
ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.
ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್ರೆಡ್ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…