Advertisement
ಸುದ್ದಿಗಳು

ವ್ಯಸನದಿಂದ ಒಂದು ಕುಟುಂಬ ನಾಶವಾದರೆ, ಅದು ನನ್ನ ಕುಟುಂಬ ಹಾಳಾದಷ್ಟೇ ನೋವು ಕೊಡುತ್ತದೆ- ಶಾಸಕ ಅಂಗಾರ

Share

ಸುಳ್ಯ: ಮದ್ಯದಿಂದ ಮತ್ತು ಇತರ ವ್ಯಸನದಿಂದ ಒಂದು ಕುಟುಂಬ ನಾಶವಾದರೆ ಅದು ನನ್ನ ಕುಟುಂಬ ಹಾಳಾದಷ್ಟೇ ನೋವು ಕೊಡುತ್ತದೆ. ಆದುದರಿಂದ ಸಮಾಜದ ನೋವನ್ನು ಹೋಗಲಾಡಿಸಲು ಎಲ್ಲರೂ ವ್ಯಸನದಿಂದ ಮುಕ್ತರಾಗಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ‌.ಟ್ರಸ್ಟ್ ಸುಳ್ಯ ತಾಲೂಕು, ನವಜೀವನ ಸಮಿತಿ ಸುಳ್ಯ, ಹಾಗೂ ಪ್ರಗತಿಬಂಧು ಸ್ವಸಹಾಯ ಒಕ್ಕೂಟ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಶ್ರೀ ಶಾರದಾಂಬಾ ವೇದಿಕೆಯಲ್ಲಿ ನಡೆದ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮೃತಿ ಮತ್ತು ವ್ಯಸನಮುಕ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಸನ ಮುಕ್ತ ಸಮಾಜದ ಕಲ್ಪನೆ ಮಹಾತ್ಮಾ ಗಾಂಧೀಜಿಯವರಿಗೆ ಇತ್ತು. ಆದರೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ವ್ಯಸನ ಮುಕ್ತ ಸಮಾಜ ಮಾಡಲು ಸಾಧ್ಯವಾಗಿಲ್ಲ. ಇದನ್ನು ಸರಕಾರಗಳು ಮಾಡಬೇಕಿತ್ತು. ಆದರೆ ಅಧಿಕಾರಕ್ಕೆ ಮತ್ತು ಹಣಕ್ಕೆ ಹೆಚ್ಚು ಒತ್ತು ನೀಡುವುದರಿಂದ ಸಂಪೂರ್ಣ ಮದ್ಯಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗಿಲ್ಲ. ನಾವು ಗಟ್ಟಿಯಾಗಿದ್ದರೆ ನಮ್ಮನ್ನು ಯಾರೂ ಹಾಳು ಮಾಡಲು ಸಾಧ್ಯವಿಲ್ಲ. ವ್ಯಸನಗಳ ವಿರುದ್ಧ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರ ಜಾಗೃತಿ ಮೂಡಿಸುತಿದೆ. ಆ ಜಾಗೃತಿ ನಮ್ಮ ಮನಸಿನಲ್ಲಿ ಸದಾ ಇರಬೇಕು ಎಂದು ಅವರು ಹೇಳಿದರು.

ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ವಿಶ್ವನಾಥ ರೈ ಕಳಂಜ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಪರಿವಾರಕಾನ ಮದರ್ ತೆರೇಸಾ ಚರ್ಚ್ ನ ಫಾದರ್ ಜೋಸೆಫ್ ಪೂದಕುಯಿ, ಪಂಜ ನೆಕ್ಕಿಲ ತಾಜುಲ್ ಹುದಾ ಎಜ್ಯುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ನೂರುದ್ದೀನ್ ಝುಹರಿ, ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಜನಾರ್ಧನ ಉಬರಡ್ಕ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.

ಸಮಾವೇಶದಲ್ಲಿ ನವಜೀವನ ಸಮಿತಿ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ಹಮ್ಮಿಕೊಳ್ಳಲಾಗಿತ್ತು. ಪಾನಮುಕ್ತ ತಾಲೂಕಿಗೆ ಹಕ್ಕೊತ್ತಾಯ ನಿರ್ಣಯವನ್ನು ಕೈಗೊಂಡು ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಗಾಂಧಿ ಜಯಂತಿ ಅಂಗವಾಗಿ ಜನಜಾಗೃತಿ ದ ಮತ್ತು ಯೋಜನೆಯ ವತಿಯಿಂದ ಬೆಳಿಗ್ಗೆ 151 ಕಡೆ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

2 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

2 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

2 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

2 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

11 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

15 hours ago