ಸುಳ್ಯ: ಸುಳ್ಯ ಸರ್ವೀಸ್ ಬಸ್ ನಿಲ್ದಾಣದಿಂದ ಖಾಸಗೀ ವ್ಯಾನೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ಹಗಲು ಸಂಭವಿಸಿದೆ. ವ್ಯಾನ್ ಡಿಕ್ಕಿ ಹೊಡೆದ ರಭಸಕ್ಕೆ ತಡೆಬೇಲಿ ಅಡ್ಡಲಾಗಿ ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣದಿಂದ ಹೊರಡುತ್ತಿದ್ದಂತೆ ವ್ಯಾನ್ ನಿಯಂತ್ರಣ ತಪ್ಪಿ ಚರಂಡಿಯ ಸ್ಲಾಬ್ ಮೇಲೆ ಹತ್ತಿ ತಡೆಬೇಲಿಗೆ ಡಿಕ್ಕಿ ಹೊಡೆದು ನಿಂತಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಚಿಕಿತ್ಸೆಗಾಗಿ ಸುಳ್ಯ ಸರ್ಕಾರಿ ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಾನ್ ಗೆ ಅಲ್ಪ ಸ್ವಲ್ಪ ಹಾನಿ ಸಂಭವಿಸಿದೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…