Advertisement
ನಮ್ಮೂರ ಸುದ್ದಿ

ಶಂಕಿತ ಡೆಂಗ್ಯು ಪ್ರಕರಣ : ತಕ್ಷಣ ಕಾರ್ಯಪ್ರವೃತ್ತವಾದ ಆರೋಗ್ಯ ಇಲಾಖೆ

Share

ಗುತ್ತಿಗಾರು: ಶಂಕಿತ ಡೆಂಗ್ಯು ಪ್ರಕರಣ ಪತ್ತೆಯಾದ ತಕ್ಷಣವೇ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ತಕ್ಷಣ ಕಾರ್ಯಪ್ರವೃತ್ತವಾಗಿ ಫಾಗಿಂಗ್ ಹಾಗೂ ಜಾಗೃತಿ ಮೂಡಿಸಿದೆ.

ಗುತ್ತಿಗಾರು ಗ್ರಾಮದ ವಳಲಂಬೆ ಪರಿಸರದ ಒಂದು ಮನೆಯಲ್ಲಿ ಶಂಕಿತ ಡೆಂಗ್ಯು ಪ್ರಕರಣ ಪತ್ತೆಯಾಗಿತ್ತು.  ಹೀಗಾಗಿ ತಕ್ಷಣ ಕಾರ್ಯಪ್ರವೃತ್ತವಾದ ಆರೋಗ್ಯ ಇಲಾಖೆಯು ಫಾಗಿಂಗ್ ವ್ಯವಸ್ಥೆಗೆ ಮುಂದಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು ಸಹಯೋಗ ದೊಂದಿಗೆ ಡೆಂಗ್ಯೂ ಪ್ರಕರಣಗಳು ಕಂಡು ಬಂದ ಪರಿಸರದ ಮನೆಗಳಲ್ಲಿ  ಫಾಗಿಂಗ್ ಮಾಡಲಾಯಿತು. ಇದರ ಜೊತೆಗೆ ವಳಲಂಬೆ ಪ್ರದೇಶದ ವಿವಿಧ ಕಡೆಗಳಲ್ಲಿ  ಡೆಂಗ್ಯು ಬಗ್ಗೆ ಜಾಗೃತಿ ಹಾಗೂ ಮಾಹಿತಿ ನೀಡಲಾಯಿತು.

 

ಈಗ ಎಲ್ಲೆಡೆ  ಸಾಮಾನ್ಯ ಜ್ವರಗಳು, ವೈರಲ್ ಜ್ವರಗಳು ಇದೆ. ಆದರೆ ಒಂದೆರಡು ದಿನಗಳಲ್ಲಿ ಜ್ವರದ ಲಕ್ಷಣ ಕಡಿಮೆಯಾಗದೇ ಇದ್ದರೆ ತಕ್ಷಣವೇ ರಕ್ತ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆಗೆ ಮಾಡಬೇಕು ಎಂದು ಇದೇ ವೇಳೆ ಸಲಹೆ ನೀಡಲಾಯಿತು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಮನೆ ಸಮೀಪ, ತೋಟಗಳಲ್ಲಿ  ಮುಂಜಾಗ್ರತೆ ಕೈಗೊಳ್ಳಲೂ ಸೂಚನೆ ನೀಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

9 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

10 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

22 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago