Advertisement
ಸುದ್ದಿಗಳು

ಶಂಕಿತ ನಕ್ಸಲ್ ಮುಖಂಡ ರೂಪೇಶ್ ಮಡಿಕೇರಿ ನ್ಯಾಯಾಲಯಕ್ಕೆ ಹಾಜರು

Share

ಮಡಿಕೇರಿ  :  ಶಂಕಿತ ನಕ್ಸಲ್ ಮುಖಂಡ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ನಕ್ಸಲ್ ಪ್ರಕರಣಗಳನ್ನು ಎದುರಿಸುತ್ತಿರುವ ರೂಪೇಶ್‍  ಬಿಗಿ ಭದ್ರತೆಯಲ್ಲಿ ಮಡಿಕೇರಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ರೂಪೇಶ್‍ನನ್ನು ಸೋಮವಾರ ಸಂಜೆ ಕರೆತಂದು ಮಡಿಕೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಕೇರಳ ಭಯೋತ್ಪಾದಕ ನಿಗ್ರಹ ದಳ, ಕೇರಳ ಪೊಲೀಸರು ಮತ್ತು ಕೊಡಗು ಪೊಲೀಸ್ ಕಮಾಂಡೊಗಳು ಶಸ್ತ್ರಸಜ್ಜಿತರಾಗಿ ಬಿಗಿ ಭದ್ರತೆಯಲ್ಲಿ ಇಂದು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದರು. ಪೊಲೀಸ್ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ನಕ್ಸಲ್ ಬಾರಿ ಜಿಂದಾಬಾದ್, ಮಾವೋವಾದಿಗಳು ಅಪರಾಧಿಗಳಲ್ಲ ಎಂದು ಘೋಷಣೆ ಕೂಗಿದ ರೂಪೇಶ್, ನಗುನಗುತ್ತಾ ನ್ಯಾಯಾಲಯ ಆವರಣ ಪ್ರವೇಶಿಸಿದ.
ಬಳಿಕ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ವೀರಪ್ಪ.ವಿ.ಮಲ್ಲಾಪುರ ಅವರ ಎದುರು ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಹಾಜರುಪಡಿಸಲಾಯಿತು. ತನ್ನ ಪ್ರಕರಣದ ಪರವಾಗಿ ತಾನೇ ವಾದಿಸುವುದಾಗಿ ಈ ಹಿಂದೆಯೇ ರೂಪೇಶ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಆರೋಪಿ ರೂಪೇಶ್‍ಗೆ ವಾದ ಮಂಡಿಸಲು ನ್ಯಾಯಮೂರ್ತಿಗಳು ಅವಕಾಶ ನೀಡಿದರು ಎಂದು ಹೇಳಲಾಗಿದೆ.
ವಾದವನ್ನು ಆಲಿಸಿದ ನಂತರ ನ್ಯಾಯಾಧೀಶರು, ಸರಕಾರಿ ವಕೀಲರಿಗೂ ಪ್ರತಿವಾದ ಮಂಡಿಸಲು ಜುಲೈ 23ಕ್ಕೆ ದಿನಾಂಕ ನಿಗದಿ ಮಾಡಿ, ಮುಂದಿನ ವಿಚಾರಣೆಯನ್ನು 21 ದಿನಗಳ ಕಾಲ ಮುಂದೂಡಿದರು.
ಕೇಂದ್ರ ಗುಪ್ತ ದಳ, ರಾಜ್ಯ ಗುಪ್ತ ದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ಹಾಜರಿದ್ದರು.
ನ್ಯಾಯಾಲಯದ ಮುಖ್ಯ ದ್ವಾರದಿಂದ ಹೊರ ಬಂದ ರೂಪೇಶ್ ಮತ್ತೆ ನಕ್ಸಲ್ ಪರ ಘೋಷಣೆ ಮೊಳಗಿಸಿ ಪೊಲೀಸ್ ವಾಹನವೇರಿದ. ಪೊಲೀಸ್ ಸರ್ಪಗಾವಲಿನಲ್ಲಿ ರೂಪೇಶ್‍ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

20 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago