Advertisement
ಸುದ್ದಿಗಳು

ಶಂಕಿತ ನಕ್ಸಲ್ ಮುಖಂಡ ರೂಪೇಶ್ ಮಡಿಕೇರಿ ನ್ಯಾಯಾಲಯಕ್ಕೆ ಹಾಜರು

Share

ಮಡಿಕೇರಿ  :  ಶಂಕಿತ ನಕ್ಸಲ್ ಮುಖಂಡ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ನಕ್ಸಲ್ ಪ್ರಕರಣಗಳನ್ನು ಎದುರಿಸುತ್ತಿರುವ ರೂಪೇಶ್‍  ಬಿಗಿ ಭದ್ರತೆಯಲ್ಲಿ ಮಡಿಕೇರಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ರೂಪೇಶ್‍ನನ್ನು ಸೋಮವಾರ ಸಂಜೆ ಕರೆತಂದು ಮಡಿಕೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಕೇರಳ ಭಯೋತ್ಪಾದಕ ನಿಗ್ರಹ ದಳ, ಕೇರಳ ಪೊಲೀಸರು ಮತ್ತು ಕೊಡಗು ಪೊಲೀಸ್ ಕಮಾಂಡೊಗಳು ಶಸ್ತ್ರಸಜ್ಜಿತರಾಗಿ ಬಿಗಿ ಭದ್ರತೆಯಲ್ಲಿ ಇಂದು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದರು. ಪೊಲೀಸ್ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ನಕ್ಸಲ್ ಬಾರಿ ಜಿಂದಾಬಾದ್, ಮಾವೋವಾದಿಗಳು ಅಪರಾಧಿಗಳಲ್ಲ ಎಂದು ಘೋಷಣೆ ಕೂಗಿದ ರೂಪೇಶ್, ನಗುನಗುತ್ತಾ ನ್ಯಾಯಾಲಯ ಆವರಣ ಪ್ರವೇಶಿಸಿದ.
ಬಳಿಕ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ವೀರಪ್ಪ.ವಿ.ಮಲ್ಲಾಪುರ ಅವರ ಎದುರು ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಹಾಜರುಪಡಿಸಲಾಯಿತು. ತನ್ನ ಪ್ರಕರಣದ ಪರವಾಗಿ ತಾನೇ ವಾದಿಸುವುದಾಗಿ ಈ ಹಿಂದೆಯೇ ರೂಪೇಶ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಆರೋಪಿ ರೂಪೇಶ್‍ಗೆ ವಾದ ಮಂಡಿಸಲು ನ್ಯಾಯಮೂರ್ತಿಗಳು ಅವಕಾಶ ನೀಡಿದರು ಎಂದು ಹೇಳಲಾಗಿದೆ.
ವಾದವನ್ನು ಆಲಿಸಿದ ನಂತರ ನ್ಯಾಯಾಧೀಶರು, ಸರಕಾರಿ ವಕೀಲರಿಗೂ ಪ್ರತಿವಾದ ಮಂಡಿಸಲು ಜುಲೈ 23ಕ್ಕೆ ದಿನಾಂಕ ನಿಗದಿ ಮಾಡಿ, ಮುಂದಿನ ವಿಚಾರಣೆಯನ್ನು 21 ದಿನಗಳ ಕಾಲ ಮುಂದೂಡಿದರು.
ಕೇಂದ್ರ ಗುಪ್ತ ದಳ, ರಾಜ್ಯ ಗುಪ್ತ ದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ಹಾಜರಿದ್ದರು.
ನ್ಯಾಯಾಲಯದ ಮುಖ್ಯ ದ್ವಾರದಿಂದ ಹೊರ ಬಂದ ರೂಪೇಶ್ ಮತ್ತೆ ನಕ್ಸಲ್ ಪರ ಘೋಷಣೆ ಮೊಳಗಿಸಿ ಪೊಲೀಸ್ ವಾಹನವೇರಿದ. ಪೊಲೀಸ್ ಸರ್ಪಗಾವಲಿನಲ್ಲಿ ರೂಪೇಶ್‍ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

39 minutes ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

4 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

4 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

12 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

14 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

14 hours ago