Advertisement
ಸುದ್ದಿಗಳು

ಶಂಕು ಹುಳುಗಳು – ನಿರ್ವಹಣೆ ಕ್ರಮ

Share

ಮಂಗಳೂರು : ಪ್ರಾಣಿ ಪ್ರಪಂಚದ ಕೀಟಗಳ ನಂತರ ಅತೀ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಶಂಕು ಹುಳುಗಳು ಮಣ್ಣು ಹಾಗೂ ನೀರಿನಲ್ಲಿ ವಾಸವಾಗಿರುತ್ತವೆ. ತರಕಾರಿ, ನೆಡುತೋಪು ಬೆಳೆಗಳು, ಅರಣ್ಯ ಹಾಗೂ ಹೊಲದ ಬೆಳೆಗಳನ್ನು ತಿಂದು ನಾಶ ಮಾಡುತ್ತಿರುತ್ತವೆ. ಈ ಹುಳುವಿನ ಚಟುವಟಿಕೆ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳುಗಳಲ್ಲಿ ಹೆಚ್ಚಿರುತ್ತದೆ. ಹಗಲಿನ ವೇಳೆಯಲ್ಲಿ ಎಲೆ ಮತ್ತು ಕಲ್ಲುಗಳ ಕೆಳಗೆ ಅವಿತುಕೊಳ್ಳುತ್ತವೆ. ರಾತ್ರಿಯ ವೇಳೆ ಫ್ರೌಢಾವಸ್ಥೆಯ ಹುಳುಗಳು ಹೊರಬಂದು ಹಣ್ಣು ಮತ್ತು ತರಕಾರಿಗಳನ್ನು ತಿಂದು ಹಾನಿ ಮಾಡುತ್ತವೆ. ಕೆಲವೊಮ್ಮೆ ತುಂತುರು ಮಳೆ ಹಾಗೂ ಮಂದ ಸೂರ್ಯನ ಪ್ರಕಾಶದಲ್ಲಿ ಹಗಲಿನ ವೇಳೆಯಲ್ಲೂ ಇವುಗಳ ಬಾಧೆಯನ್ನು ಕಾಣಬಹುದು.

ನಿರ್ವಹಣೆ ಕ್ರಮ : ತೋಟದಲ್ಲಿ ಕಳೆಗಿಡಗಳನ್ನು ತೆಗೆದು ಸ್ವಚ್ಛತೆಯನ್ನು ಕಾಪಾಡುವುದು. ಪ್ರಾರಂಭದ ಹಂತಗಳಲ್ಲಿ ಹುಳುಗಳನ್ನು ಆಯ್ದು ಗುಂಡಿಯಲ್ಲಿ ಹಾಕಿ ಸುಣ್ಣ ಸಿಂಪಡಿಸುವುದರಿಂದ ನಾಶಪಡಿಸಬಹುದು. ಹಸಿ ಗೋಣಿ ಚೀಲಗಳನ್ನು ತೋಟದಲ್ಲಿ ಅಲ್ಲಲ್ಲಿ ಇಡುವುದರಿಂದ ಹುಳುಗಳು ಚೀಲದ ಕೆಳಗೆ ಅವಿತುಕೊಳ್ಳುತ್ತವೆ. ಹೀಗೆ ಸಂಗ್ರಹಿಸಿದ ಹುಳುಗಳನ್ನು ಉಪ್ಪು ಅಥವಾ ಕಾಪರ್ ಸಲ್ಫೇಟ್ ಹಾಕಿ ನಾಶಪಡಿಸಬಹುದು.

ರಾಸಾಯನಿಕವಾಗಿ : ಮೆಟಾಲ್ಡಿಹೈಡ್ ರಾಸಾಯನಿಕ ಪೀಡೆನಾಶಕದ ಸಣ್ಣ ಸಣ್ಣ ತುಣುಕುಗಳನ್ನು ಹೊಲದಲ್ಲಿ ಅಲ್ಲಲ್ಲಿ ಚೆಲ್ಲಿದಾಗ ಹುಳುಗಳು ಆಕರ್ಷಣೆಗೊಂಡು ಕೀಟನಾಶಕಗಳನ್ನು ತಿನ್ನುವುದರಿಂದ ಹುಳುಗಳನ್ನು ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು.
ವಿಶೇಷ ಸೂಚನೆ : ಯಾವುದೇ ರಾಸಾಯನಿಕದಿಂದ ಈ ಹುಳುಗಳು ಸತ್ತಿದ್ದು ಕಂಡುಬಂದಲ್ಲಿ ತಕ್ಷಣ ಅವುಗಳನ್ನು ಆರಿಸಿ ಆಳವಾಗಿ ನೆಲದಲ್ಲಿ ಹೂಳಬೇಕು. ಇಲ್ಲದಿದ್ದರೆ ಸಾಕು ಪ್ರಾಣಿಗಳು ಹೀಗೆ ಸತ್ತಿರುವ ಶಂಕುಹುಳುಗಳನ್ನು ತಿನ್ನುವುದರಿಂದ ಅವುಗಳಿಗೆ ತೊಂದರೆಯಾಗಬಹುದು. ಶಂಕುಹುಳಗಳು ನಿಸರ್ಗದಲ್ಲಿ ಶೇ.75 ರಿಂದ 80 ರಷ್ಟು ತಮ್ಮ ಆಹಾರವನ್ನು ಕೊಳೆಯುತ್ತಿರುವ ಪ್ರಾಣಿ ಮತ್ತು ಸಸ್ಯಜನ್ಯ ಪದಾರ್ಥಗಳನ್ನು ತಿಂದು ನಿಸರ್ಗದಲ್ಲಿ ಸಮತೋಲನವನ್ನು ಕಾಪಾಡುತ್ತವೆ. ಇಂತಹ ಸಂದರ್ಭದಲ್ಲಿ ಬೆಳೆಗಳ ಮೇಲೆ ಹಾವಳಿಯಿದ್ದಾಗಮಾತ್ರ ಹತೋಟಿ ಕ್ರಮ ಕೈಗೊಂಡು ನಿಸರ್ಗದ ಸಮತೋಲನವನ್ನು ಕಾಪಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ರಿಶಲ್ ಡಿಸೋಜ, ತೋಟಗಾರಿಕೆ ವಿಷಯತಜ್ಞರು, ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬಹುದು ಎಂದು ಮಂಗಳೂರು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago