Advertisement
ಸುದ್ದಿಗಳು

ಶಂಕು ಹುಳುಗಳು – ನಿರ್ವಹಣೆ ಕ್ರಮ

Share

ಮಂಗಳೂರು : ಪ್ರಾಣಿ ಪ್ರಪಂಚದ ಕೀಟಗಳ ನಂತರ ಅತೀ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಶಂಕು ಹುಳುಗಳು ಮಣ್ಣು ಹಾಗೂ ನೀರಿನಲ್ಲಿ ವಾಸವಾಗಿರುತ್ತವೆ. ತರಕಾರಿ, ನೆಡುತೋಪು ಬೆಳೆಗಳು, ಅರಣ್ಯ ಹಾಗೂ ಹೊಲದ ಬೆಳೆಗಳನ್ನು ತಿಂದು ನಾಶ ಮಾಡುತ್ತಿರುತ್ತವೆ. ಈ ಹುಳುವಿನ ಚಟುವಟಿಕೆ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳುಗಳಲ್ಲಿ ಹೆಚ್ಚಿರುತ್ತದೆ. ಹಗಲಿನ ವೇಳೆಯಲ್ಲಿ ಎಲೆ ಮತ್ತು ಕಲ್ಲುಗಳ ಕೆಳಗೆ ಅವಿತುಕೊಳ್ಳುತ್ತವೆ. ರಾತ್ರಿಯ ವೇಳೆ ಫ್ರೌಢಾವಸ್ಥೆಯ ಹುಳುಗಳು ಹೊರಬಂದು ಹಣ್ಣು ಮತ್ತು ತರಕಾರಿಗಳನ್ನು ತಿಂದು ಹಾನಿ ಮಾಡುತ್ತವೆ. ಕೆಲವೊಮ್ಮೆ ತುಂತುರು ಮಳೆ ಹಾಗೂ ಮಂದ ಸೂರ್ಯನ ಪ್ರಕಾಶದಲ್ಲಿ ಹಗಲಿನ ವೇಳೆಯಲ್ಲೂ ಇವುಗಳ ಬಾಧೆಯನ್ನು ಕಾಣಬಹುದು.

ನಿರ್ವಹಣೆ ಕ್ರಮ : ತೋಟದಲ್ಲಿ ಕಳೆಗಿಡಗಳನ್ನು ತೆಗೆದು ಸ್ವಚ್ಛತೆಯನ್ನು ಕಾಪಾಡುವುದು. ಪ್ರಾರಂಭದ ಹಂತಗಳಲ್ಲಿ ಹುಳುಗಳನ್ನು ಆಯ್ದು ಗುಂಡಿಯಲ್ಲಿ ಹಾಕಿ ಸುಣ್ಣ ಸಿಂಪಡಿಸುವುದರಿಂದ ನಾಶಪಡಿಸಬಹುದು. ಹಸಿ ಗೋಣಿ ಚೀಲಗಳನ್ನು ತೋಟದಲ್ಲಿ ಅಲ್ಲಲ್ಲಿ ಇಡುವುದರಿಂದ ಹುಳುಗಳು ಚೀಲದ ಕೆಳಗೆ ಅವಿತುಕೊಳ್ಳುತ್ತವೆ. ಹೀಗೆ ಸಂಗ್ರಹಿಸಿದ ಹುಳುಗಳನ್ನು ಉಪ್ಪು ಅಥವಾ ಕಾಪರ್ ಸಲ್ಫೇಟ್ ಹಾಕಿ ನಾಶಪಡಿಸಬಹುದು.

ರಾಸಾಯನಿಕವಾಗಿ : ಮೆಟಾಲ್ಡಿಹೈಡ್ ರಾಸಾಯನಿಕ ಪೀಡೆನಾಶಕದ ಸಣ್ಣ ಸಣ್ಣ ತುಣುಕುಗಳನ್ನು ಹೊಲದಲ್ಲಿ ಅಲ್ಲಲ್ಲಿ ಚೆಲ್ಲಿದಾಗ ಹುಳುಗಳು ಆಕರ್ಷಣೆಗೊಂಡು ಕೀಟನಾಶಕಗಳನ್ನು ತಿನ್ನುವುದರಿಂದ ಹುಳುಗಳನ್ನು ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು.
ವಿಶೇಷ ಸೂಚನೆ : ಯಾವುದೇ ರಾಸಾಯನಿಕದಿಂದ ಈ ಹುಳುಗಳು ಸತ್ತಿದ್ದು ಕಂಡುಬಂದಲ್ಲಿ ತಕ್ಷಣ ಅವುಗಳನ್ನು ಆರಿಸಿ ಆಳವಾಗಿ ನೆಲದಲ್ಲಿ ಹೂಳಬೇಕು. ಇಲ್ಲದಿದ್ದರೆ ಸಾಕು ಪ್ರಾಣಿಗಳು ಹೀಗೆ ಸತ್ತಿರುವ ಶಂಕುಹುಳುಗಳನ್ನು ತಿನ್ನುವುದರಿಂದ ಅವುಗಳಿಗೆ ತೊಂದರೆಯಾಗಬಹುದು. ಶಂಕುಹುಳಗಳು ನಿಸರ್ಗದಲ್ಲಿ ಶೇ.75 ರಿಂದ 80 ರಷ್ಟು ತಮ್ಮ ಆಹಾರವನ್ನು ಕೊಳೆಯುತ್ತಿರುವ ಪ್ರಾಣಿ ಮತ್ತು ಸಸ್ಯಜನ್ಯ ಪದಾರ್ಥಗಳನ್ನು ತಿಂದು ನಿಸರ್ಗದಲ್ಲಿ ಸಮತೋಲನವನ್ನು ಕಾಪಾಡುತ್ತವೆ. ಇಂತಹ ಸಂದರ್ಭದಲ್ಲಿ ಬೆಳೆಗಳ ಮೇಲೆ ಹಾವಳಿಯಿದ್ದಾಗಮಾತ್ರ ಹತೋಟಿ ಕ್ರಮ ಕೈಗೊಂಡು ನಿಸರ್ಗದ ಸಮತೋಲನವನ್ನು ಕಾಪಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ರಿಶಲ್ ಡಿಸೋಜ, ತೋಟಗಾರಿಕೆ ವಿಷಯತಜ್ಞರು, ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬಹುದು ಎಂದು ಮಂಗಳೂರು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

13 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

19 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

20 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

2 days ago