Advertisement
ಸುದ್ದಿಗಳು

ಶಂಕು ಹುಳುಗಳು – ನಿರ್ವಹಣೆ ಕ್ರಮ

Share

ಮಂಗಳೂರು : ಪ್ರಾಣಿ ಪ್ರಪಂಚದ ಕೀಟಗಳ ನಂತರ ಅತೀ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಶಂಕು ಹುಳುಗಳು ಮಣ್ಣು ಹಾಗೂ ನೀರಿನಲ್ಲಿ ವಾಸವಾಗಿರುತ್ತವೆ. ತರಕಾರಿ, ನೆಡುತೋಪು ಬೆಳೆಗಳು, ಅರಣ್ಯ ಹಾಗೂ ಹೊಲದ ಬೆಳೆಗಳನ್ನು ತಿಂದು ನಾಶ ಮಾಡುತ್ತಿರುತ್ತವೆ. ಈ ಹುಳುವಿನ ಚಟುವಟಿಕೆ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳುಗಳಲ್ಲಿ ಹೆಚ್ಚಿರುತ್ತದೆ. ಹಗಲಿನ ವೇಳೆಯಲ್ಲಿ ಎಲೆ ಮತ್ತು ಕಲ್ಲುಗಳ ಕೆಳಗೆ ಅವಿತುಕೊಳ್ಳುತ್ತವೆ. ರಾತ್ರಿಯ ವೇಳೆ ಫ್ರೌಢಾವಸ್ಥೆಯ ಹುಳುಗಳು ಹೊರಬಂದು ಹಣ್ಣು ಮತ್ತು ತರಕಾರಿಗಳನ್ನು ತಿಂದು ಹಾನಿ ಮಾಡುತ್ತವೆ. ಕೆಲವೊಮ್ಮೆ ತುಂತುರು ಮಳೆ ಹಾಗೂ ಮಂದ ಸೂರ್ಯನ ಪ್ರಕಾಶದಲ್ಲಿ ಹಗಲಿನ ವೇಳೆಯಲ್ಲೂ ಇವುಗಳ ಬಾಧೆಯನ್ನು ಕಾಣಬಹುದು.

ನಿರ್ವಹಣೆ ಕ್ರಮ : ತೋಟದಲ್ಲಿ ಕಳೆಗಿಡಗಳನ್ನು ತೆಗೆದು ಸ್ವಚ್ಛತೆಯನ್ನು ಕಾಪಾಡುವುದು. ಪ್ರಾರಂಭದ ಹಂತಗಳಲ್ಲಿ ಹುಳುಗಳನ್ನು ಆಯ್ದು ಗುಂಡಿಯಲ್ಲಿ ಹಾಕಿ ಸುಣ್ಣ ಸಿಂಪಡಿಸುವುದರಿಂದ ನಾಶಪಡಿಸಬಹುದು. ಹಸಿ ಗೋಣಿ ಚೀಲಗಳನ್ನು ತೋಟದಲ್ಲಿ ಅಲ್ಲಲ್ಲಿ ಇಡುವುದರಿಂದ ಹುಳುಗಳು ಚೀಲದ ಕೆಳಗೆ ಅವಿತುಕೊಳ್ಳುತ್ತವೆ. ಹೀಗೆ ಸಂಗ್ರಹಿಸಿದ ಹುಳುಗಳನ್ನು ಉಪ್ಪು ಅಥವಾ ಕಾಪರ್ ಸಲ್ಫೇಟ್ ಹಾಕಿ ನಾಶಪಡಿಸಬಹುದು.

ರಾಸಾಯನಿಕವಾಗಿ : ಮೆಟಾಲ್ಡಿಹೈಡ್ ರಾಸಾಯನಿಕ ಪೀಡೆನಾಶಕದ ಸಣ್ಣ ಸಣ್ಣ ತುಣುಕುಗಳನ್ನು ಹೊಲದಲ್ಲಿ ಅಲ್ಲಲ್ಲಿ ಚೆಲ್ಲಿದಾಗ ಹುಳುಗಳು ಆಕರ್ಷಣೆಗೊಂಡು ಕೀಟನಾಶಕಗಳನ್ನು ತಿನ್ನುವುದರಿಂದ ಹುಳುಗಳನ್ನು ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು.
ವಿಶೇಷ ಸೂಚನೆ : ಯಾವುದೇ ರಾಸಾಯನಿಕದಿಂದ ಈ ಹುಳುಗಳು ಸತ್ತಿದ್ದು ಕಂಡುಬಂದಲ್ಲಿ ತಕ್ಷಣ ಅವುಗಳನ್ನು ಆರಿಸಿ ಆಳವಾಗಿ ನೆಲದಲ್ಲಿ ಹೂಳಬೇಕು. ಇಲ್ಲದಿದ್ದರೆ ಸಾಕು ಪ್ರಾಣಿಗಳು ಹೀಗೆ ಸತ್ತಿರುವ ಶಂಕುಹುಳುಗಳನ್ನು ತಿನ್ನುವುದರಿಂದ ಅವುಗಳಿಗೆ ತೊಂದರೆಯಾಗಬಹುದು. ಶಂಕುಹುಳಗಳು ನಿಸರ್ಗದಲ್ಲಿ ಶೇ.75 ರಿಂದ 80 ರಷ್ಟು ತಮ್ಮ ಆಹಾರವನ್ನು ಕೊಳೆಯುತ್ತಿರುವ ಪ್ರಾಣಿ ಮತ್ತು ಸಸ್ಯಜನ್ಯ ಪದಾರ್ಥಗಳನ್ನು ತಿಂದು ನಿಸರ್ಗದಲ್ಲಿ ಸಮತೋಲನವನ್ನು ಕಾಪಾಡುತ್ತವೆ. ಇಂತಹ ಸಂದರ್ಭದಲ್ಲಿ ಬೆಳೆಗಳ ಮೇಲೆ ಹಾವಳಿಯಿದ್ದಾಗಮಾತ್ರ ಹತೋಟಿ ಕ್ರಮ ಕೈಗೊಂಡು ನಿಸರ್ಗದ ಸಮತೋಲನವನ್ನು ಕಾಪಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ರಿಶಲ್ ಡಿಸೋಜ, ತೋಟಗಾರಿಕೆ ವಿಷಯತಜ್ಞರು, ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬಹುದು ಎಂದು ಮಂಗಳೂರು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

1 hour ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

2 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

2 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

10 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

10 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago