Advertisement
ಸುದ್ದಿಗಳು

ಶತಮಾನದ ಹಿಂದೆಯೇ ಭಾರತೀಯ ಮಹಿಳೆಯ ಶೌರ್ಯ ಪ್ರದರ್ಶಿಸಿದ ಅಬ್ಬಕ್ಕ: ಮುಖ್ಯಮಂತ್ರಿ ಯಡಿಯೂರಪ್ಪ

Share

ಮೂಡಬಿದ್ರೆ: ವೀರರಾಣಿ ಅಬ್ಬಕ್ಕ ಸಾವಿರಾರು ವರ್ಷಗಳ ಹಿಂದೆಯೇ ಫೋರ್ಚುಗೀಸರ ವಿರುದ್ಧ ಹೋರಾಡುವ ಮೂಲಕ ಭಾರತೀಯ ಮಹಿಳೆಯ ಶೌರ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಅವರು ಮೂಡಬಿದ್ರೆಯಲ್ಲಿ ನಡೆಯುತ್ತಿರುವ 17 ನೇ ವರ್ಷದ ಕೋಟಿ ಚೆನ್ನಯ್ಯ ಕಂಬಳದಲ್ಲಿ ವೀರರಾಣಿ ಅಬ್ಬಕ್ಕ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. ಅಂದಿನ ಯುಗದಲ್ಲಿ ಮಹಿಳೆಯೊಬ್ಬರು ದಂಡನಾಯಕತ್ವ ವಹಿಸಿರುವುದು ನಿಜಕ್ಕೂ ಅಪ್ರತಿಮವಾಗಿದೆ. ಅವರ ಪ್ರತಿಮೆ ಸ್ಥಾಪನೆ ಸಂತಸದ ಸಂಗತಿ ಎಂದು ಅವರು ಹೇಳಿದರು. ಕಂಬಳ ಕ್ರೀಡೆ ಉಳಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ. ಕಂಬಳ ನಡೆಸಲು ನ್ಯಾಯಾಲಯದಲ್ಲಿ ಹೋರಾಟ ನಡೆಸಬೇಕಾಗಿ ಬಂತು. ರಾಜ್ಯ ಸರಕಾರ ಇದಕ್ಕೆ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.

Advertisement

ಮೂಡಬಿದ್ರೆ ತಾಲೂಕಿನ ಸಮಗ್ರ ಅಭಿವೃದ್ಧಿ ಗೆ ಸರಕಾರ ಹೆಚ್ಚಿನ ಅನುದಾನ ನೀಡಲಿದೆ ಎಂದು ಅವರು ಘೋಷಿಸಿದರು.ಇದೇ ಸಂದರ್ಭದಲ್ಲಿ ವೀರರಾಣಿ ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿದರು.
ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಇದ್ದರು. ಶಾಸಕ ಉಮಾನಾಥ ಕೋಟ್ಯಾನ್ ಸ್ವಾಗತಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

19 hours ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

19 hours ago

ಕೆರೆ ಹೂಳೆತ್ತುವುದು ಹೇಗೆ..?

https://youtu.be/FKM2Jn1HjEc?si=T2YSl4_nprQpPxpC

19 hours ago

ಕೆಡ್ಡಸ ಆಚರಣೆ

https://youtu.be/ZZWXmIzNq_w?si=wYO-bayB741n62ON

19 hours ago

ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |

ಕುಂಭಮೇಳಕ್ಕೆ ತೆರಳಿದ ಅನುಭವ ಹಾಗೂ ಅಲ್ಲಿನ ಅನುಭವಗಳ ಬಗ್ಗೆ ಕೃಷಿಕ ಟಿ ಆರ್‌…

19 hours ago