Advertisement
ಸುದ್ದಿಗಳು

ಶತಮಾನದ ಹಿಂದೆಯೇ ಭಾರತೀಯ ಮಹಿಳೆಯ ಶೌರ್ಯ ಪ್ರದರ್ಶಿಸಿದ ಅಬ್ಬಕ್ಕ: ಮುಖ್ಯಮಂತ್ರಿ ಯಡಿಯೂರಪ್ಪ

Share

ಮೂಡಬಿದ್ರೆ: ವೀರರಾಣಿ ಅಬ್ಬಕ್ಕ ಸಾವಿರಾರು ವರ್ಷಗಳ ಹಿಂದೆಯೇ ಫೋರ್ಚುಗೀಸರ ವಿರುದ್ಧ ಹೋರಾಡುವ ಮೂಲಕ ಭಾರತೀಯ ಮಹಿಳೆಯ ಶೌರ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಅವರು ಮೂಡಬಿದ್ರೆಯಲ್ಲಿ ನಡೆಯುತ್ತಿರುವ 17 ನೇ ವರ್ಷದ ಕೋಟಿ ಚೆನ್ನಯ್ಯ ಕಂಬಳದಲ್ಲಿ ವೀರರಾಣಿ ಅಬ್ಬಕ್ಕ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. ಅಂದಿನ ಯುಗದಲ್ಲಿ ಮಹಿಳೆಯೊಬ್ಬರು ದಂಡನಾಯಕತ್ವ ವಹಿಸಿರುವುದು ನಿಜಕ್ಕೂ ಅಪ್ರತಿಮವಾಗಿದೆ. ಅವರ ಪ್ರತಿಮೆ ಸ್ಥಾಪನೆ ಸಂತಸದ ಸಂಗತಿ ಎಂದು ಅವರು ಹೇಳಿದರು. ಕಂಬಳ ಕ್ರೀಡೆ ಉಳಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ. ಕಂಬಳ ನಡೆಸಲು ನ್ಯಾಯಾಲಯದಲ್ಲಿ ಹೋರಾಟ ನಡೆಸಬೇಕಾಗಿ ಬಂತು. ರಾಜ್ಯ ಸರಕಾರ ಇದಕ್ಕೆ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ಮೂಡಬಿದ್ರೆ ತಾಲೂಕಿನ ಸಮಗ್ರ ಅಭಿವೃದ್ಧಿ ಗೆ ಸರಕಾರ ಹೆಚ್ಚಿನ ಅನುದಾನ ನೀಡಲಿದೆ ಎಂದು ಅವರು ಘೋಷಿಸಿದರು.ಇದೇ ಸಂದರ್ಭದಲ್ಲಿ ವೀರರಾಣಿ ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿದರು.
ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಇದ್ದರು. ಶಾಸಕ ಉಮಾನಾಥ ಕೋಟ್ಯಾನ್ ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

3 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

5 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

6 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

9 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

10 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

13 hours ago