ಅರಂತೋಡು: ಅರಂತೋಡು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಯಶಸ್ವಿನ ಹಾದಿಯಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿ ಜೂನ್ ತಿಂಗಳಲ್ಲಿನಲ್ಲಿ ನಡೆಯುವ ಎರಡು ದಿನದ ಶತಮಾನೋತ್ಸವ ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಸಹಕಾರ ನೀಡಬೇಕೆಂದು ಅರಂತೋಡು-ತೊಡಿಕಾನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹೇಳಿದರು.
ಅವರು ಸಹಕಾರಿ ಬ್ಯಾಂಕ್ನ ಶತಮಾನೋತ್ಸವ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ದಯಾನಂದ ಕುರುಂಜಿ,ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾಮೇದಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷೆ ನೀಲಾವತಿ ಕೊಡಂಕೇರಿ, ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಪ್ರಗತಿಪರ ಕೃಷಿಕರಾದ ವಸಂತ ಭಟ್ ದೊಡ್ಡಡ್ಕ, ಜತ್ತಪ್ಪ ಮಾಸ್ತರ್ ಅಳಿಕೆ, ಎ.ವಿ ತೀರ್ಥರಾಮ ಮಾಸ್ತರ್ ಅಡ್ಕಬಳೆ, ಕಿಶೋರ್ ಕುಮಾರ್ ಉಳುವಾರು, ವಿಜೇತ್ ಮರುವಳ, ನಾರಾಯಣ ನಾಗನಮೂಲೆ, ಕುಸುಮಾಧರ ಅಡ್ಕಬಳೆ , ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ ನಾಯಕ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…