ಅರಂತೋಡು: ಅರಂತೋಡು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಯಶಸ್ವಿನ ಹಾದಿಯಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿ ಜೂನ್ ತಿಂಗಳಲ್ಲಿನಲ್ಲಿ ನಡೆಯುವ ಎರಡು ದಿನದ ಶತಮಾನೋತ್ಸವ ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಸಹಕಾರ ನೀಡಬೇಕೆಂದು ಅರಂತೋಡು-ತೊಡಿಕಾನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹೇಳಿದರು.
ಅವರು ಸಹಕಾರಿ ಬ್ಯಾಂಕ್ನ ಶತಮಾನೋತ್ಸವ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ದಯಾನಂದ ಕುರುಂಜಿ,ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾಮೇದಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷೆ ನೀಲಾವತಿ ಕೊಡಂಕೇರಿ, ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಪ್ರಗತಿಪರ ಕೃಷಿಕರಾದ ವಸಂತ ಭಟ್ ದೊಡ್ಡಡ್ಕ, ಜತ್ತಪ್ಪ ಮಾಸ್ತರ್ ಅಳಿಕೆ, ಎ.ವಿ ತೀರ್ಥರಾಮ ಮಾಸ್ತರ್ ಅಡ್ಕಬಳೆ, ಕಿಶೋರ್ ಕುಮಾರ್ ಉಳುವಾರು, ವಿಜೇತ್ ಮರುವಳ, ನಾರಾಯಣ ನಾಗನಮೂಲೆ, ಕುಸುಮಾಧರ ಅಡ್ಕಬಳೆ , ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ ನಾಯಕ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…