ನವದೆಹಲಿ: ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್ನ ಸಂವಿಧಾನ ಪೀಠ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸಂವಿಧಾನ ಪೀಠ ತನ್ನ ತೀರ್ಪು ಪ್ರಕಟಿಸುವ ವಿಷಯವನ್ನು ಸುಪ್ರೀಂಕೋರ್ಟ್ನ ಮೂಲಗಳು ಖಚಿತಪಡಿಸುತ್ತಲೇ ದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ. ಅಯೋಧ್ಯೆ ನಗರದಲ್ಲಂತೂ 4 ಸಾವಿರಕ್ಕೂ ಹೆಚ್ಚು ಅರೆಮಿಲಿಟರಿ ಪಡೆ ಯೋಧರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.ಅಗತ್ಯಬಿದ್ದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಅಯೋಧ್ಯೆಗೆ ರವಾನಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಅಯೋಧ್ಯೆ ತೀರ್ಪು ಪ್ರಕಟವಾಗುವ ಕಾಲ ಸನ್ನಿಹಿತವಾಗುತ್ತಿರುವಂತೆ ಸಂಭ್ರಮಾಚರಣೆಯ ಹೆಸರಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ಎಚ್ಚರವಹಿಸಬೇಕು ಎಂದು ದೇಶದ ವಿವಿಧ ಮಠಗಳ ಸ್ವಾಮೀಜಿಗಳು, ಮುಸ್ಲಿಂ ಧಾರ್ಮಿಕ ಮುಖಂಡರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…