ನವದೆಹಲಿ: ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್ನ ಸಂವಿಧಾನ ಪೀಠ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸಂವಿಧಾನ ಪೀಠ ತನ್ನ ತೀರ್ಪು ಪ್ರಕಟಿಸುವ ವಿಷಯವನ್ನು ಸುಪ್ರೀಂಕೋರ್ಟ್ನ ಮೂಲಗಳು ಖಚಿತಪಡಿಸುತ್ತಲೇ ದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ. ಅಯೋಧ್ಯೆ ನಗರದಲ್ಲಂತೂ 4 ಸಾವಿರಕ್ಕೂ ಹೆಚ್ಚು ಅರೆಮಿಲಿಟರಿ ಪಡೆ ಯೋಧರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.ಅಗತ್ಯಬಿದ್ದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಅಯೋಧ್ಯೆಗೆ ರವಾನಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಅಯೋಧ್ಯೆ ತೀರ್ಪು ಪ್ರಕಟವಾಗುವ ಕಾಲ ಸನ್ನಿಹಿತವಾಗುತ್ತಿರುವಂತೆ ಸಂಭ್ರಮಾಚರಣೆಯ ಹೆಸರಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ಎಚ್ಚರವಹಿಸಬೇಕು ಎಂದು ದೇಶದ ವಿವಿಧ ಮಠಗಳ ಸ್ವಾಮೀಜಿಗಳು, ಮುಸ್ಲಿಂ ಧಾರ್ಮಿಕ ಮುಖಂಡರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…