ನವದೆಹಲಿ: ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್ನ ಸಂವಿಧಾನ ಪೀಠ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸಂವಿಧಾನ ಪೀಠ ತನ್ನ ತೀರ್ಪು ಪ್ರಕಟಿಸುವ ವಿಷಯವನ್ನು ಸುಪ್ರೀಂಕೋರ್ಟ್ನ ಮೂಲಗಳು ಖಚಿತಪಡಿಸುತ್ತಲೇ ದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ. ಅಯೋಧ್ಯೆ ನಗರದಲ್ಲಂತೂ 4 ಸಾವಿರಕ್ಕೂ ಹೆಚ್ಚು ಅರೆಮಿಲಿಟರಿ ಪಡೆ ಯೋಧರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.ಅಗತ್ಯಬಿದ್ದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಅಯೋಧ್ಯೆಗೆ ರವಾನಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಅಯೋಧ್ಯೆ ತೀರ್ಪು ಪ್ರಕಟವಾಗುವ ಕಾಲ ಸನ್ನಿಹಿತವಾಗುತ್ತಿರುವಂತೆ ಸಂಭ್ರಮಾಚರಣೆಯ ಹೆಸರಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ಎಚ್ಚರವಹಿಸಬೇಕು ಎಂದು ದೇಶದ ವಿವಿಧ ಮಠಗಳ ಸ್ವಾಮೀಜಿಗಳು, ಮುಸ್ಲಿಂ ಧಾರ್ಮಿಕ ಮುಖಂಡರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..".…
26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ…
ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF…
ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370…