ಶಬರಿಮಲೆ: ದೇಶದ ಭಕ್ತರ ನಂಬಿಕೆಯ, ಶ್ರದ್ಧೆಯ ತಾಣವಾದ ಶಬರಿಮಲೆ ಯಾತ್ರೆಗೆ ಈಗ ಭಕ್ತರ ಸಂಖ್ಯೆ ಹೆಚ್ಚಿದೆ. ಕಳೆದ ವರ್ಷ ಮಹಿಳಾ ಪ್ರವೇಶದ ವಿವಾದದ ಕಾರಣದಿಂದ ಸಂಕಲ್ಪ ಕೈಗೊಂಡು ಯಾತ್ರೆ ಮಾಡಲಾಗದ ಭಕ್ತರು ತಮ್ಮ ಶ್ರದ್ಧೆ, ನಂಬಿಕೆಯ ತಾಣಕ್ಕೆ ಈಗ ಭೇಟಿಗೆ ಆರಂಭಿಸಿದ್ದಾರೆ. ಹೀಗಾಗಿ ದೇವಳದ ಆದಾಯವೂ ಹೆಚ್ಚಿದ್ದು ದಿನಕ್ಕೆ 3.30 ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗುತ್ತಿದೆ. ಶನಿವಾರ ಮಂಡಲ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗಿತ್ತು. ಆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಆಗಮಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.
ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎನ್. ವಾಸು ಮಾಹಿತಿ ನೀಡಿ, “ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮೊದಲ ದಿನ ಕಾಣಿಕೆ ರೂಪದಲ್ಲಿ 3.32 ಕೋಟಿ ಆದಾಯ ದೇಗುಲಕ್ಕೆ ಬಂದಿದೆ. ಕಳೆದ ವರ್ಷ 2.04 ಕೋಟಿ ಆದಾಯ ಸಂಗ್ರಹವಾಗಿತ್ತು ಎಂದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಸಂಗ್ರಹವಾಗಿರುವ ಆದಾಯ ಶೇ.50ರಷ್ಟು ಹೆಚ್ಚಾಗಿದೆ. ಈ ವರ್ಷ ತೀರ್ಥಯಾತ್ರೆಯು ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದರು. ಭಕ್ತಾದಿಗಳಿಗೆ ಹೆಚ್ಚಿನ ವ್ಯವಸ್ಥೆ ಮಾಡಲು ದೇವಸ್ವಂ ಬೋರ್ಡ್ ಪ್ರಯತ್ನ ಮಾಡುತ್ತಿದೆ ಎಂದರು.
ಕಳೆದ ವರ್ಷ ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್ ತೀರ್ಪನ್ನು ರಾಜ್ಯ ಸರಕಾರ ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ವರ್ಷ ಮಹಿಳೆಯರಿಗೆ ಯಾವುದೇ ನಿರ್ಬಂಧ ಇಲ್ಲದ ಕಾರಣ ವಿವಾದಗಳಿಲ್ಲದೆ ಯಾತ್ರೆ ನಡೆಯುತ್ತಿದೆ.
( ಮೂಲ: ಸುದ್ದಿ ಜಾಲ)
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…