ಶಬರಿಮಲೆ: ದೇಶದ ಭಕ್ತರ ನಂಬಿಕೆಯ, ಶ್ರದ್ಧೆಯ ತಾಣವಾದ ಶಬರಿಮಲೆ ಯಾತ್ರೆಗೆ ಈಗ ಭಕ್ತರ ಸಂಖ್ಯೆ ಹೆಚ್ಚಿದೆ. ಕಳೆದ ವರ್ಷ ಮಹಿಳಾ ಪ್ರವೇಶದ ವಿವಾದದ ಕಾರಣದಿಂದ ಸಂಕಲ್ಪ ಕೈಗೊಂಡು ಯಾತ್ರೆ ಮಾಡಲಾಗದ ಭಕ್ತರು ತಮ್ಮ ಶ್ರದ್ಧೆ, ನಂಬಿಕೆಯ ತಾಣಕ್ಕೆ ಈಗ ಭೇಟಿಗೆ ಆರಂಭಿಸಿದ್ದಾರೆ. ಹೀಗಾಗಿ ದೇವಳದ ಆದಾಯವೂ ಹೆಚ್ಚಿದ್ದು ದಿನಕ್ಕೆ 3.30 ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗುತ್ತಿದೆ. ಶನಿವಾರ ಮಂಡಲ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗಿತ್ತು. ಆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಆಗಮಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.
ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎನ್. ವಾಸು ಮಾಹಿತಿ ನೀಡಿ, “ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮೊದಲ ದಿನ ಕಾಣಿಕೆ ರೂಪದಲ್ಲಿ 3.32 ಕೋಟಿ ಆದಾಯ ದೇಗುಲಕ್ಕೆ ಬಂದಿದೆ. ಕಳೆದ ವರ್ಷ 2.04 ಕೋಟಿ ಆದಾಯ ಸಂಗ್ರಹವಾಗಿತ್ತು ಎಂದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಸಂಗ್ರಹವಾಗಿರುವ ಆದಾಯ ಶೇ.50ರಷ್ಟು ಹೆಚ್ಚಾಗಿದೆ. ಈ ವರ್ಷ ತೀರ್ಥಯಾತ್ರೆಯು ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದರು. ಭಕ್ತಾದಿಗಳಿಗೆ ಹೆಚ್ಚಿನ ವ್ಯವಸ್ಥೆ ಮಾಡಲು ದೇವಸ್ವಂ ಬೋರ್ಡ್ ಪ್ರಯತ್ನ ಮಾಡುತ್ತಿದೆ ಎಂದರು.
ಕಳೆದ ವರ್ಷ ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್ ತೀರ್ಪನ್ನು ರಾಜ್ಯ ಸರಕಾರ ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ವರ್ಷ ಮಹಿಳೆಯರಿಗೆ ಯಾವುದೇ ನಿರ್ಬಂಧ ಇಲ್ಲದ ಕಾರಣ ವಿವಾದಗಳಿಲ್ಲದೆ ಯಾತ್ರೆ ನಡೆಯುತ್ತಿದೆ.
( ಮೂಲ: ಸುದ್ದಿ ಜಾಲ)
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…