ಶಬರಿಮಲೆ: ಜಲಪ್ರಳಯದ ಕರಾಳ ಛಾಯೆ ಪಂಪಾ ನದಿಯಲ್ಲಿ ಹಾಗೇ ಇದೆ

January 14, 2020
2:30 PM

ಶಬರಿಮಲೆ: ಕೇರಳದ ಜಲಪ್ರಳಯ ಶತಮಾನದ ಪ್ರಾಕೃತಿಕ ದುರಂತಗಳಲ್ಲಿ ಒಂದು. ರಾಜ್ಯದ ನದಿಗಳೆಲ್ಲಾ ಉಕ್ಕಿ ಹರಿದು, ಅಲ್ಲೋಲ‌ ಕಲ್ಲೋಲ ಸೃಷ್ಟಿಸಿದ್ದು ನಮಗೆಲ್ಲಾ ತಿಳಿದೇ ಇದೆ. ಆನಂತರ ಮಳೆಯ ಪ್ರಮಾಣ ಕಡಿಮೆಯಾಗಿ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟ ಪಾಡು ತಿಳಿಯದವರು ಯಾರು ಇಲ್ಲ.

ಈ ಜಲಪ್ರಳಯಕ್ಕೆ ಸಿಕ್ಕ ಶಬರಿಮಲೆ ಕ್ಷೇತ್ರಕ್ಕೆ ದೈವೀಕ ಸಂಬಂದವಿರುವ ಪಂಪಾನದಿಯೂ ಈಗಲೂ ಜಲಪ್ರಳಯದ ಕರಾಳ ಛಾಯೆಯನ್ನು ತೋರಿಸುತ್ತಿದೆ. ತುಂಬಿ ಹರಿಯುತ್ತಿದ್ದ ಪಂಪಾನದಿಯ ತುಂಬಾ ಮರಳಿನ ರಾಶಿ ಹಾಗೇ ಇದೆ. ಜಲಪ್ರಳಯವಾಗಿ ವರ್ಷ ಎರಡಾದರೂ ಪಂಪಾ ಸ್ಥಿತಿ ಬದಲಾಗಿಲ್ಲ.

Advertisement

ಪಂಪಾ‌ ನದಿಯು ಈಗ ಕೇವಲ‌ ಸಣ್ಣ ತೊರೆಯಂತೆ ಹರಿಯುತ್ತಿದೆ. ಅಯ್ಯಪ್ಪ ಸ್ವಾಮಿಯ ಪೂರ್ವ ಹಿನ್ನೆಲೆಯಲ್ಲಿ ಇದೇ ಪಂಪಾ ನದಿಯ ತೀರದಲ್ಲಿ ಪಂದಳರಾಜ ರಾಜಶೇಖರ ಅವರಿಗೆ ಮಣಿಕಂಠ ದೊರಕಿದ್ದು ಎಂಬ ಐತಿಹ್ಯವಿರುವುದರಿಂದ ಶಬರಿಮಲೆಗೆ ಬರುವ ಎಲ್ಲಾ ಭಕ್ತಾದಿಗಳು ಪಂಪಾನದಿಯಲ್ಲಿ ಪುಣ್ಯ ಸ್ನಾನ ಮಾಡಿಯೇ ನೀಲಿಮಲೆ, ಶಬರಿ‌ ಪೀಠ, ಅಪ್ಪಾಚಿ‌ಮೇಡು ಏರಿ ಪವಿತ್ರ ಶಬರಿಮಲೆಯ ಸ್ವಾಮಿ ಅಯ್ಯಪ್ಪ ನ ಸನ್ನಿಧಾನಕ್ಕೆ ಹೋಗುತ್ತಾರೆ. ಈ ಹಿಂದಿನ ಪಂಪಾ ನದಿಯ ಸೊಬಗು ಈಗಿಲ್ಲ ಎಂಬ ವೇದನೆ ಎಲ್ಲಾ ಭಕ್ತರಿಗೆ ಭಾಸವಾಗುತ್ತಿರುವುದು ಸುಳ್ಳಲ್ಲ‌. ಪಂಪಾ ನದಿಯ ಹಿಂದಿನ ಸೊಬಗು ಕಾಣಲು ನದಿಯಲ್ಲಿ ಲೋಡ್‌‌ಗಟ್ಟಳೆ ಬಿದ್ದಿರುವ ಮರಳಿನ ರಾಶಿ ತೆರವು ಮಾಡಬೇಕಿದೆ.

ನದಿಗೆ ಬಟ್ಟೆ ಎಸೆಯದಂತೆ ಸೂಚನೆ: ಪಂಪಾನದಿಯಲ್ಲಿ ಅಯ್ಯಪ್ಪ ಭಕ್ತಾದಿಗಳು ತಮ್ಮ ಬಟ್ಟೆಗಳನ್ನು ತೇಲಿಬಿಡುತ್ತಿದ್ದು, ಇದರಿಂದಲೂ ಪಂಪಾನದಿಯ ಪವಿತ್ರತೆಗೆ ದಕ್ಕೆಯಾಗುತ್ತದೆ. ಈ ಬಟ್ಟೆಯ ರಾಶಿಯ ನದಿ ತೀರದಲ್ಲಿ ರಾಶಿಯಾಗುತ್ತಿದೆ. ಸ್ವಚ್ಚತಾ ಸಿಬಂದಿಗಳು ನದಿಯಿಂದ ನಿರಂತರವಾಗಿ ಬಟ್ಟೆಗಳನ್ನು ತೆರವುಮಾಡುತ್ತಿದ್ದಾರೆ.
ಇದಕ್ಕಾಗಿ ಭಕ್ತಾದಿಗಳು ಪಂಪಾನದಿಯಲ್ಲಿ ಯಾವುದೇ ಬಟ್ಟೆಗಳನ್ನು ಎಸೆಯದೇ ಕ್ಷೇತ್ರದ ಪಾವಿತ್ರ್ಯತೆ ರಕ್ಷಣೆ ಹಾಗೂ ಸ್ವಚ್ಛ ಶಬರಿಮಲೆ ಪರಿಕಲ್ಪನೆಗೆ ಸಹಕರಿಸುವಂತೆ ತಿರಾವೂಂಕೂರು ದೇವಸ್ವಂ ಬೋರ್ಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror