Advertisement
ಸುದ್ದಿಗಳು

ಶಬರಿಮಲೆ: ಜಲಪ್ರಳಯದ ಕರಾಳ ಛಾಯೆ ಪಂಪಾ ನದಿಯಲ್ಲಿ ಹಾಗೇ ಇದೆ

Share

ಶಬರಿಮಲೆ: ಕೇರಳದ ಜಲಪ್ರಳಯ ಶತಮಾನದ ಪ್ರಾಕೃತಿಕ ದುರಂತಗಳಲ್ಲಿ ಒಂದು. ರಾಜ್ಯದ ನದಿಗಳೆಲ್ಲಾ ಉಕ್ಕಿ ಹರಿದು, ಅಲ್ಲೋಲ‌ ಕಲ್ಲೋಲ ಸೃಷ್ಟಿಸಿದ್ದು ನಮಗೆಲ್ಲಾ ತಿಳಿದೇ ಇದೆ. ಆನಂತರ ಮಳೆಯ ಪ್ರಮಾಣ ಕಡಿಮೆಯಾಗಿ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟ ಪಾಡು ತಿಳಿಯದವರು ಯಾರು ಇಲ್ಲ.

ಈ ಜಲಪ್ರಳಯಕ್ಕೆ ಸಿಕ್ಕ ಶಬರಿಮಲೆ ಕ್ಷೇತ್ರಕ್ಕೆ ದೈವೀಕ ಸಂಬಂದವಿರುವ ಪಂಪಾನದಿಯೂ ಈಗಲೂ ಜಲಪ್ರಳಯದ ಕರಾಳ ಛಾಯೆಯನ್ನು ತೋರಿಸುತ್ತಿದೆ. ತುಂಬಿ ಹರಿಯುತ್ತಿದ್ದ ಪಂಪಾನದಿಯ ತುಂಬಾ ಮರಳಿನ ರಾಶಿ ಹಾಗೇ ಇದೆ. ಜಲಪ್ರಳಯವಾಗಿ ವರ್ಷ ಎರಡಾದರೂ ಪಂಪಾ ಸ್ಥಿತಿ ಬದಲಾಗಿಲ್ಲ.

ಪಂಪಾ‌ ನದಿಯು ಈಗ ಕೇವಲ‌ ಸಣ್ಣ ತೊರೆಯಂತೆ ಹರಿಯುತ್ತಿದೆ. ಅಯ್ಯಪ್ಪ ಸ್ವಾಮಿಯ ಪೂರ್ವ ಹಿನ್ನೆಲೆಯಲ್ಲಿ ಇದೇ ಪಂಪಾ ನದಿಯ ತೀರದಲ್ಲಿ ಪಂದಳರಾಜ ರಾಜಶೇಖರ ಅವರಿಗೆ ಮಣಿಕಂಠ ದೊರಕಿದ್ದು ಎಂಬ ಐತಿಹ್ಯವಿರುವುದರಿಂದ ಶಬರಿಮಲೆಗೆ ಬರುವ ಎಲ್ಲಾ ಭಕ್ತಾದಿಗಳು ಪಂಪಾನದಿಯಲ್ಲಿ ಪುಣ್ಯ ಸ್ನಾನ ಮಾಡಿಯೇ ನೀಲಿಮಲೆ, ಶಬರಿ‌ ಪೀಠ, ಅಪ್ಪಾಚಿ‌ಮೇಡು ಏರಿ ಪವಿತ್ರ ಶಬರಿಮಲೆಯ ಸ್ವಾಮಿ ಅಯ್ಯಪ್ಪ ನ ಸನ್ನಿಧಾನಕ್ಕೆ ಹೋಗುತ್ತಾರೆ. ಈ ಹಿಂದಿನ ಪಂಪಾ ನದಿಯ ಸೊಬಗು ಈಗಿಲ್ಲ ಎಂಬ ವೇದನೆ ಎಲ್ಲಾ ಭಕ್ತರಿಗೆ ಭಾಸವಾಗುತ್ತಿರುವುದು ಸುಳ್ಳಲ್ಲ‌. ಪಂಪಾ ನದಿಯ ಹಿಂದಿನ ಸೊಬಗು ಕಾಣಲು ನದಿಯಲ್ಲಿ ಲೋಡ್‌‌ಗಟ್ಟಳೆ ಬಿದ್ದಿರುವ ಮರಳಿನ ರಾಶಿ ತೆರವು ಮಾಡಬೇಕಿದೆ.

ನದಿಗೆ ಬಟ್ಟೆ ಎಸೆಯದಂತೆ ಸೂಚನೆ: ಪಂಪಾನದಿಯಲ್ಲಿ ಅಯ್ಯಪ್ಪ ಭಕ್ತಾದಿಗಳು ತಮ್ಮ ಬಟ್ಟೆಗಳನ್ನು ತೇಲಿಬಿಡುತ್ತಿದ್ದು, ಇದರಿಂದಲೂ ಪಂಪಾನದಿಯ ಪವಿತ್ರತೆಗೆ ದಕ್ಕೆಯಾಗುತ್ತದೆ. ಈ ಬಟ್ಟೆಯ ರಾಶಿಯ ನದಿ ತೀರದಲ್ಲಿ ರಾಶಿಯಾಗುತ್ತಿದೆ. ಸ್ವಚ್ಚತಾ ಸಿಬಂದಿಗಳು ನದಿಯಿಂದ ನಿರಂತರವಾಗಿ ಬಟ್ಟೆಗಳನ್ನು ತೆರವುಮಾಡುತ್ತಿದ್ದಾರೆ.
ಇದಕ್ಕಾಗಿ ಭಕ್ತಾದಿಗಳು ಪಂಪಾನದಿಯಲ್ಲಿ ಯಾವುದೇ ಬಟ್ಟೆಗಳನ್ನು ಎಸೆಯದೇ ಕ್ಷೇತ್ರದ ಪಾವಿತ್ರ್ಯತೆ ರಕ್ಷಣೆ ಹಾಗೂ ಸ್ವಚ್ಛ ಶಬರಿಮಲೆ ಪರಿಕಲ್ಪನೆಗೆ ಸಹಕರಿಸುವಂತೆ ತಿರಾವೂಂಕೂರು ದೇವಸ್ವಂ ಬೋರ್ಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

7 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

7 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

14 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

16 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

1 day ago