Advertisement
ಸುದ್ದಿಗಳು

ಶಬರಿಮಲೆ: ಜಲಪ್ರಳಯದ ಕರಾಳ ಛಾಯೆ ಪಂಪಾ ನದಿಯಲ್ಲಿ ಹಾಗೇ ಇದೆ

Share

ಶಬರಿಮಲೆ: ಕೇರಳದ ಜಲಪ್ರಳಯ ಶತಮಾನದ ಪ್ರಾಕೃತಿಕ ದುರಂತಗಳಲ್ಲಿ ಒಂದು. ರಾಜ್ಯದ ನದಿಗಳೆಲ್ಲಾ ಉಕ್ಕಿ ಹರಿದು, ಅಲ್ಲೋಲ‌ ಕಲ್ಲೋಲ ಸೃಷ್ಟಿಸಿದ್ದು ನಮಗೆಲ್ಲಾ ತಿಳಿದೇ ಇದೆ. ಆನಂತರ ಮಳೆಯ ಪ್ರಮಾಣ ಕಡಿಮೆಯಾಗಿ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟ ಪಾಡು ತಿಳಿಯದವರು ಯಾರು ಇಲ್ಲ.

ಈ ಜಲಪ್ರಳಯಕ್ಕೆ ಸಿಕ್ಕ ಶಬರಿಮಲೆ ಕ್ಷೇತ್ರಕ್ಕೆ ದೈವೀಕ ಸಂಬಂದವಿರುವ ಪಂಪಾನದಿಯೂ ಈಗಲೂ ಜಲಪ್ರಳಯದ ಕರಾಳ ಛಾಯೆಯನ್ನು ತೋರಿಸುತ್ತಿದೆ. ತುಂಬಿ ಹರಿಯುತ್ತಿದ್ದ ಪಂಪಾನದಿಯ ತುಂಬಾ ಮರಳಿನ ರಾಶಿ ಹಾಗೇ ಇದೆ. ಜಲಪ್ರಳಯವಾಗಿ ವರ್ಷ ಎರಡಾದರೂ ಪಂಪಾ ಸ್ಥಿತಿ ಬದಲಾಗಿಲ್ಲ.

ಪಂಪಾ‌ ನದಿಯು ಈಗ ಕೇವಲ‌ ಸಣ್ಣ ತೊರೆಯಂತೆ ಹರಿಯುತ್ತಿದೆ. ಅಯ್ಯಪ್ಪ ಸ್ವಾಮಿಯ ಪೂರ್ವ ಹಿನ್ನೆಲೆಯಲ್ಲಿ ಇದೇ ಪಂಪಾ ನದಿಯ ತೀರದಲ್ಲಿ ಪಂದಳರಾಜ ರಾಜಶೇಖರ ಅವರಿಗೆ ಮಣಿಕಂಠ ದೊರಕಿದ್ದು ಎಂಬ ಐತಿಹ್ಯವಿರುವುದರಿಂದ ಶಬರಿಮಲೆಗೆ ಬರುವ ಎಲ್ಲಾ ಭಕ್ತಾದಿಗಳು ಪಂಪಾನದಿಯಲ್ಲಿ ಪುಣ್ಯ ಸ್ನಾನ ಮಾಡಿಯೇ ನೀಲಿಮಲೆ, ಶಬರಿ‌ ಪೀಠ, ಅಪ್ಪಾಚಿ‌ಮೇಡು ಏರಿ ಪವಿತ್ರ ಶಬರಿಮಲೆಯ ಸ್ವಾಮಿ ಅಯ್ಯಪ್ಪ ನ ಸನ್ನಿಧಾನಕ್ಕೆ ಹೋಗುತ್ತಾರೆ. ಈ ಹಿಂದಿನ ಪಂಪಾ ನದಿಯ ಸೊಬಗು ಈಗಿಲ್ಲ ಎಂಬ ವೇದನೆ ಎಲ್ಲಾ ಭಕ್ತರಿಗೆ ಭಾಸವಾಗುತ್ತಿರುವುದು ಸುಳ್ಳಲ್ಲ‌. ಪಂಪಾ ನದಿಯ ಹಿಂದಿನ ಸೊಬಗು ಕಾಣಲು ನದಿಯಲ್ಲಿ ಲೋಡ್‌‌ಗಟ್ಟಳೆ ಬಿದ್ದಿರುವ ಮರಳಿನ ರಾಶಿ ತೆರವು ಮಾಡಬೇಕಿದೆ.

ನದಿಗೆ ಬಟ್ಟೆ ಎಸೆಯದಂತೆ ಸೂಚನೆ: ಪಂಪಾನದಿಯಲ್ಲಿ ಅಯ್ಯಪ್ಪ ಭಕ್ತಾದಿಗಳು ತಮ್ಮ ಬಟ್ಟೆಗಳನ್ನು ತೇಲಿಬಿಡುತ್ತಿದ್ದು, ಇದರಿಂದಲೂ ಪಂಪಾನದಿಯ ಪವಿತ್ರತೆಗೆ ದಕ್ಕೆಯಾಗುತ್ತದೆ. ಈ ಬಟ್ಟೆಯ ರಾಶಿಯ ನದಿ ತೀರದಲ್ಲಿ ರಾಶಿಯಾಗುತ್ತಿದೆ. ಸ್ವಚ್ಚತಾ ಸಿಬಂದಿಗಳು ನದಿಯಿಂದ ನಿರಂತರವಾಗಿ ಬಟ್ಟೆಗಳನ್ನು ತೆರವುಮಾಡುತ್ತಿದ್ದಾರೆ.
ಇದಕ್ಕಾಗಿ ಭಕ್ತಾದಿಗಳು ಪಂಪಾನದಿಯಲ್ಲಿ ಯಾವುದೇ ಬಟ್ಟೆಗಳನ್ನು ಎಸೆಯದೇ ಕ್ಷೇತ್ರದ ಪಾವಿತ್ರ್ಯತೆ ರಕ್ಷಣೆ ಹಾಗೂ ಸ್ವಚ್ಛ ಶಬರಿಮಲೆ ಪರಿಕಲ್ಪನೆಗೆ ಸಹಕರಿಸುವಂತೆ ತಿರಾವೂಂಕೂರು ದೇವಸ್ವಂ ಬೋರ್ಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

40 minutes ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

9 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

10 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

10 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

20 hours ago