ಸುದ್ದಿಗಳು

ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ ಆದೇಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಇಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

Advertisement

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಹಿಂದಿನ ಸುಪ್ರೀಂಕೋರ್ಟ್​ ಸಿಜೆಐ ದೀಪಕ್​ ಮಿಶ್ರಾ ಅವರ ನೇತೃತ್ವದ ಪೀಠ ನೀಡಿದ್ದ ತೀರ್ಪಿನ ವಿರುದ್ಧ 56 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಪರಿಶೀಲನೆ ನಡೆಸಿದ್ದ ಇಂದಿನ ಸಿಜೆಐ ರಂಜನ್​ ಗೊಗೊಯ್​ ಅವರ ನೇತೃತ್ವದ ಪಂಚಪೀಠ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಪಂಚಪೀಠದ್ದಲ್ಲಿದ್ದ ನ್ಯಾ.ನಾರಿಮನ್​ ಹಾಗೂ ನ್ಯಾ.ಚಂದ್ರಚೂಡ್​ ಎಂಬುವರು ವಿಭಿನ್ನವಾಗಿ ತೀರ್ಪು ನೀಡಿದ್ದರಿಂದ ಏಳು ಸದಸ್ಯರ ಪೀಠಕ್ಕೆ ಅರ್ಜಿ ವಿಚಾರಣೆಯನ್ನು ವರ್ಗಾಯಿಸಲಾಗಿದೆ.

ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿ 2018ರ ಸೆಪ್ಟೆಂಬರ್​ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಕೆಲವು ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.

ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ರಂಜನ್​ ಗೊಗೊಯ್​ ನೇತೃತ್ವದ ಪಂಚಪೀಠ ತೀರ್ಪು ಕಾಯ್ದಿರಿಸಿತ್ತು. ಮುಂದೆ ಈ ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠ ವಿಚಾರಣೆ ನಡೆಸಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

9 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

9 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

9 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

9 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

23 hours ago