Advertisement
ಸುದ್ದಿಗಳು

ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ ಆದೇಶ

Share

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಇಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

Advertisement

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಹಿಂದಿನ ಸುಪ್ರೀಂಕೋರ್ಟ್​ ಸಿಜೆಐ ದೀಪಕ್​ ಮಿಶ್ರಾ ಅವರ ನೇತೃತ್ವದ ಪೀಠ ನೀಡಿದ್ದ ತೀರ್ಪಿನ ವಿರುದ್ಧ 56 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಪರಿಶೀಲನೆ ನಡೆಸಿದ್ದ ಇಂದಿನ ಸಿಜೆಐ ರಂಜನ್​ ಗೊಗೊಯ್​ ಅವರ ನೇತೃತ್ವದ ಪಂಚಪೀಠ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಪಂಚಪೀಠದ್ದಲ್ಲಿದ್ದ ನ್ಯಾ.ನಾರಿಮನ್​ ಹಾಗೂ ನ್ಯಾ.ಚಂದ್ರಚೂಡ್​ ಎಂಬುವರು ವಿಭಿನ್ನವಾಗಿ ತೀರ್ಪು ನೀಡಿದ್ದರಿಂದ ಏಳು ಸದಸ್ಯರ ಪೀಠಕ್ಕೆ ಅರ್ಜಿ ವಿಚಾರಣೆಯನ್ನು ವರ್ಗಾಯಿಸಲಾಗಿದೆ.

ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿ 2018ರ ಸೆಪ್ಟೆಂಬರ್​ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಕೆಲವು ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.

ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ರಂಜನ್​ ಗೊಗೊಯ್​ ನೇತೃತ್ವದ ಪಂಚಪೀಠ ತೀರ್ಪು ಕಾಯ್ದಿರಿಸಿತ್ತು. ಮುಂದೆ ಈ ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠ ವಿಚಾರಣೆ ನಡೆಸಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 hour ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago