Advertisement
ಸುದ್ದಿಗಳು

ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ ಆದೇಶ

Share

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಇಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಹಿಂದಿನ ಸುಪ್ರೀಂಕೋರ್ಟ್​ ಸಿಜೆಐ ದೀಪಕ್​ ಮಿಶ್ರಾ ಅವರ ನೇತೃತ್ವದ ಪೀಠ ನೀಡಿದ್ದ ತೀರ್ಪಿನ ವಿರುದ್ಧ 56 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಪರಿಶೀಲನೆ ನಡೆಸಿದ್ದ ಇಂದಿನ ಸಿಜೆಐ ರಂಜನ್​ ಗೊಗೊಯ್​ ಅವರ ನೇತೃತ್ವದ ಪಂಚಪೀಠ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಪಂಚಪೀಠದ್ದಲ್ಲಿದ್ದ ನ್ಯಾ.ನಾರಿಮನ್​ ಹಾಗೂ ನ್ಯಾ.ಚಂದ್ರಚೂಡ್​ ಎಂಬುವರು ವಿಭಿನ್ನವಾಗಿ ತೀರ್ಪು ನೀಡಿದ್ದರಿಂದ ಏಳು ಸದಸ್ಯರ ಪೀಠಕ್ಕೆ ಅರ್ಜಿ ವಿಚಾರಣೆಯನ್ನು ವರ್ಗಾಯಿಸಲಾಗಿದೆ.

ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿ 2018ರ ಸೆಪ್ಟೆಂಬರ್​ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಕೆಲವು ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.

ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ರಂಜನ್​ ಗೊಗೊಯ್​ ನೇತೃತ್ವದ ಪಂಚಪೀಠ ತೀರ್ಪು ಕಾಯ್ದಿರಿಸಿತ್ತು. ಮುಂದೆ ಈ ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠ ವಿಚಾರಣೆ ನಡೆಸಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago