Advertisement
ಸುದ್ದಿಗಳು

ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ ಆದೇಶ

Share

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಇಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಹಿಂದಿನ ಸುಪ್ರೀಂಕೋರ್ಟ್​ ಸಿಜೆಐ ದೀಪಕ್​ ಮಿಶ್ರಾ ಅವರ ನೇತೃತ್ವದ ಪೀಠ ನೀಡಿದ್ದ ತೀರ್ಪಿನ ವಿರುದ್ಧ 56 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಪರಿಶೀಲನೆ ನಡೆಸಿದ್ದ ಇಂದಿನ ಸಿಜೆಐ ರಂಜನ್​ ಗೊಗೊಯ್​ ಅವರ ನೇತೃತ್ವದ ಪಂಚಪೀಠ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಪಂಚಪೀಠದ್ದಲ್ಲಿದ್ದ ನ್ಯಾ.ನಾರಿಮನ್​ ಹಾಗೂ ನ್ಯಾ.ಚಂದ್ರಚೂಡ್​ ಎಂಬುವರು ವಿಭಿನ್ನವಾಗಿ ತೀರ್ಪು ನೀಡಿದ್ದರಿಂದ ಏಳು ಸದಸ್ಯರ ಪೀಠಕ್ಕೆ ಅರ್ಜಿ ವಿಚಾರಣೆಯನ್ನು ವರ್ಗಾಯಿಸಲಾಗಿದೆ.

ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ನೀಡಿ 2018ರ ಸೆಪ್ಟೆಂಬರ್​ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳೂ ನಡೆದಿದ್ದವು. ಕೆಲವು ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಸಂಘರ್ಷಕ್ಕೆ ಕಾರಣವಾಗಿತ್ತು.

ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದ ರಂಜನ್​ ಗೊಗೊಯ್​ ನೇತೃತ್ವದ ಪಂಚಪೀಠ ತೀರ್ಪು ಕಾಯ್ದಿರಿಸಿತ್ತು. ಮುಂದೆ ಈ ಅರ್ಜಿಗಳ ವಿಚಾರಣೆಯನ್ನು ಏಳು ಸದಸ್ಯರ ವಿಸ್ತೃತ ಪೀಠ ವಿಚಾರಣೆ ನಡೆಸಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

6 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

10 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

22 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

23 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

23 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

23 hours ago