ಶಾಂತಿಮೊಗರು : 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನ

September 4, 2019
2:00 PM

ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.

Advertisement
Advertisement

ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ 8ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ,ಪಂಚಲಿಂಗೇಶ್ವರ ಭಜನಾ ಮಂಡಳಿ ಬರೆಪ್ಪಾಡಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ವೈಭವದ ಶೋಭಾಯಾತ್ರೆ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ  ದೇವಸ್ಥಾನದಿಂದ ಮೆರವಣಿಗೆ ಕೆಲಂಬೀರಿ ಸಾಗಿ ಬಳಿಕ ಅಲ್ಲಿಂದ ಚಾಪಳ್ಳ ತನಕ ಸಾಗಿತು. ಅಲ್ಲಿಂದ ಶಾಂತಿಮೊಗರು ಕುಮಾರಧಾರಾ ನದಿಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಸಿಡಿಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಸ್ತೆಯುದ್ದಕ್ಕೂ ಸಾವಿರಾರು ಭಕ್ತರು ಸಾಗಿ ಬಂದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೋಮವಾರ ಬಿಲ್ವಪತ್ರೆ ಎಲೆ ದೀಪ ಹಚ್ಚಿಟ್ಟರೆ ಕೆಲವು ರಾಶಿಯವರಿಗೆ ಉತ್ತಮ
May 29, 2025
6:40 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group