ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.
ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ 8ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ,ಪಂಚಲಿಂಗೇಶ್ವರ ಭಜನಾ ಮಂಡಳಿ ಬರೆಪ್ಪಾಡಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ವೈಭವದ ಶೋಭಾಯಾತ್ರೆ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಿಂದ ಮೆರವಣಿಗೆ ಕೆಲಂಬೀರಿ ಸಾಗಿ ಬಳಿಕ ಅಲ್ಲಿಂದ ಚಾಪಳ್ಳ ತನಕ ಸಾಗಿತು. ಅಲ್ಲಿಂದ ಶಾಂತಿಮೊಗರು ಕುಮಾರಧಾರಾ ನದಿಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಸಿಡಿಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಸ್ತೆಯುದ್ದಕ್ಕೂ ಸಾವಿರಾರು ಭಕ್ತರು ಸಾಗಿ ಬಂದರು.
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…