ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.
ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ 8ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ,ಪಂಚಲಿಂಗೇಶ್ವರ ಭಜನಾ ಮಂಡಳಿ ಬರೆಪ್ಪಾಡಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ವೈಭವದ ಶೋಭಾಯಾತ್ರೆ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಿಂದ ಮೆರವಣಿಗೆ ಕೆಲಂಬೀರಿ ಸಾಗಿ ಬಳಿಕ ಅಲ್ಲಿಂದ ಚಾಪಳ್ಳ ತನಕ ಸಾಗಿತು. ಅಲ್ಲಿಂದ ಶಾಂತಿಮೊಗರು ಕುಮಾರಧಾರಾ ನದಿಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಸಿಡಿಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಸ್ತೆಯುದ್ದಕ್ಕೂ ಸಾವಿರಾರು ಭಕ್ತರು ಸಾಗಿ ಬಂದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…