ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.
ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ 8ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ,ಪಂಚಲಿಂಗೇಶ್ವರ ಭಜನಾ ಮಂಡಳಿ ಬರೆಪ್ಪಾಡಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ವೈಭವದ ಶೋಭಾಯಾತ್ರೆ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಿಂದ ಮೆರವಣಿಗೆ ಕೆಲಂಬೀರಿ ಸಾಗಿ ಬಳಿಕ ಅಲ್ಲಿಂದ ಚಾಪಳ್ಳ ತನಕ ಸಾಗಿತು. ಅಲ್ಲಿಂದ ಶಾಂತಿಮೊಗರು ಕುಮಾರಧಾರಾ ನದಿಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಸಿಡಿಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಸ್ತೆಯುದ್ದಕ್ಕೂ ಸಾವಿರಾರು ಭಕ್ತರು ಸಾಗಿ ಬಂದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…