ದಕ್ಷಿಣ ಜಿಲ್ಲೆಯ ಶಾಲಾ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಮಾತಾನಾಡಿದ ಅವರು, ತಂಬಾಕು ವ್ಯಸನ ತಡೆಗಟ್ಟಲು ಶಾಲಾ ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳ ಮೂಲಕ ಪರಿಣಾಮಕಾರಿಯಾದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲೆಯ ನೂರು ಗಜ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.
ತಂಬಾಕು ವ್ಯಸನಕ್ಕೆ ಯುವ ಜನರು ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು . ಈಗಾಗಲೇ ಹಲವಾರು ಶಾಲೆಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಅರಿವು ಕಾರ್ಯಕ್ರಮಗಳು ನಡೆದಿದೆ. ಅದರಲ್ಲಿ ಹಲವು ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಗುರುತಿಸಿದೆ. ಈ ಶಾಲೆಗಳಲ್ಲಿ ತಂಬಾಕು ಮುಕ್ತ ವಲಯ (ಯಲ್ಲೋ ಲೈನ್) ರಚನೆಯಾಗಬೇಕು ಎಂದ ಹೇಳಿದರು. ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ಥಾಪನೆ ಮಾಡಬೇಕು ಹಾಗೂ ಇ-ಸಿಗರೇಟು ಮಾರಾಟ ಹಾಗೂ ಜಾಹೀರಾತು ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಕುಟುಂಬ ಕಲ್ಯಾಣ ಅಧಿಕಾರಿ ಸಿಖಂದರ್ ಪಾಷ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪನಿರ್ದೇಶಕ ರಾಜೇಶ್. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ| ರಾಜೇಶ್ವರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…