ದಕ್ಷಿಣ ಜಿಲ್ಲೆಯ ಶಾಲಾ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಮಾತಾನಾಡಿದ ಅವರು, ತಂಬಾಕು ವ್ಯಸನ ತಡೆಗಟ್ಟಲು ಶಾಲಾ ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳ ಮೂಲಕ ಪರಿಣಾಮಕಾರಿಯಾದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲೆಯ ನೂರು ಗಜ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.
ತಂಬಾಕು ವ್ಯಸನಕ್ಕೆ ಯುವ ಜನರು ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು . ಈಗಾಗಲೇ ಹಲವಾರು ಶಾಲೆಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಅರಿವು ಕಾರ್ಯಕ್ರಮಗಳು ನಡೆದಿದೆ. ಅದರಲ್ಲಿ ಹಲವು ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಗುರುತಿಸಿದೆ. ಈ ಶಾಲೆಗಳಲ್ಲಿ ತಂಬಾಕು ಮುಕ್ತ ವಲಯ (ಯಲ್ಲೋ ಲೈನ್) ರಚನೆಯಾಗಬೇಕು ಎಂದ ಹೇಳಿದರು. ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ಥಾಪನೆ ಮಾಡಬೇಕು ಹಾಗೂ ಇ-ಸಿಗರೇಟು ಮಾರಾಟ ಹಾಗೂ ಜಾಹೀರಾತು ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಕುಟುಂಬ ಕಲ್ಯಾಣ ಅಧಿಕಾರಿ ಸಿಖಂದರ್ ಪಾಷ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪನಿರ್ದೇಶಕ ರಾಜೇಶ್. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ| ರಾಜೇಶ್ವರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…