Advertisement
MIRROR FOCUS

ಶಾಲಾ ಕಾಲೇಜುಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣ – ಜಿಲ್ಲಾಧಿಕಾರಿ ಸೂಚನೆ

Share

ದಕ್ಷಿಣ ಜಿಲ್ಲೆಯ ಶಾಲಾ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಮಾತಾನಾಡಿದ ಅವರು, ತಂಬಾಕು ವ್ಯಸನ ತಡೆಗಟ್ಟಲು ಶಾಲಾ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿಗಳ ಮೂಲಕ ಪರಿಣಾಮಕಾರಿಯಾದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲೆಯ ನೂರು ಗಜ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ  ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.

ತಂಬಾಕು ವ್ಯಸನಕ್ಕೆ ಯುವ ಜನರು ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು . ಈಗಾಗಲೇ ಹಲವಾರು ಶಾಲೆಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಅರಿವು ಕಾರ್ಯಕ್ರಮಗಳು ನಡೆದಿದೆ. ಅದರಲ್ಲಿ ಹಲವು ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಗುರುತಿಸಿದೆ. ಈ ಶಾಲೆಗಳಲ್ಲಿ ತಂಬಾಕು ಮುಕ್ತ ವಲಯ (ಯಲ್ಲೋ ಲೈನ್) ರಚನೆಯಾಗಬೇಕು ಎಂದ ಹೇಳಿದರು. ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ಥಾಪನೆ ಮಾಡಬೇಕು ಹಾಗೂ ಇ-ಸಿಗರೇಟು ಮಾರಾಟ ಹಾಗೂ ಜಾಹೀರಾತು ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ  ಕುಟುಂಬ ಕಲ್ಯಾಣ ಅಧಿಕಾರಿ ಸಿಖಂದರ್ ಪಾಷ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪನಿರ್ದೇಶಕ ರಾಜೇಶ್. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ| ರಾಜೇಶ್ವರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

48 minutes ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

6 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

21 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

22 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago