Advertisement
MIRROR FOCUS

ಶಾಲಾ ಕಾಲೇಜುಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣ – ಜಿಲ್ಲಾಧಿಕಾರಿ ಸೂಚನೆ

Share

ದಕ್ಷಿಣ ಜಿಲ್ಲೆಯ ಶಾಲಾ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಮಾತಾನಾಡಿದ ಅವರು, ತಂಬಾಕು ವ್ಯಸನ ತಡೆಗಟ್ಟಲು ಶಾಲಾ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿಗಳ ಮೂಲಕ ಪರಿಣಾಮಕಾರಿಯಾದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲೆಯ ನೂರು ಗಜ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ  ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.

ತಂಬಾಕು ವ್ಯಸನಕ್ಕೆ ಯುವ ಜನರು ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು . ಈಗಾಗಲೇ ಹಲವಾರು ಶಾಲೆಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಅರಿವು ಕಾರ್ಯಕ್ರಮಗಳು ನಡೆದಿದೆ. ಅದರಲ್ಲಿ ಹಲವು ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಗುರುತಿಸಿದೆ. ಈ ಶಾಲೆಗಳಲ್ಲಿ ತಂಬಾಕು ಮುಕ್ತ ವಲಯ (ಯಲ್ಲೋ ಲೈನ್) ರಚನೆಯಾಗಬೇಕು ಎಂದ ಹೇಳಿದರು. ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ಥಾಪನೆ ಮಾಡಬೇಕು ಹಾಗೂ ಇ-ಸಿಗರೇಟು ಮಾರಾಟ ಹಾಗೂ ಜಾಹೀರಾತು ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ  ಕುಟುಂಬ ಕಲ್ಯಾಣ ಅಧಿಕಾರಿ ಸಿಖಂದರ್ ಪಾಷ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪನಿರ್ದೇಶಕ ರಾಜೇಶ್. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ| ರಾಜೇಶ್ವರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

1 hour ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

7 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

7 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

13 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

14 hours ago