ಶಾಲಾ ಶಿಕ್ಷಕಿಯ ಕೊಲೆಗೆ ಕಾರಣ ನಿಗೂಢ…!

June 15, 2019
11:15 AM

ಮಡಿಕೇರಿ:  ಶಿಕ್ಷಕಿಯನ್ನು ಗುಂಡು ಹೊಡೆದು ಹತ್ಯೆಗೈದ ಕೊಲೆಗಾರ ಕೊನೆಗೆ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬಾಳೆಲೆಯಲ್ಲಿ ನಡೆದಿದ್ದು, ಈ ಕೊಲೆಗೆ ಕಾರಣ ನಿಗೂಢವಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.

Advertisement
Advertisement
Advertisement

ಕಳತ್ಮಾಡು ಲಯನ್ಸ್ ಪ್ರೌಢಶಾಲೆ ಶಿಕ್ಷಕಿ, ಬಾಳೆಲೆ ಗ್ರಾಮದ ದಿ. ಆದೇಂಗಡ ದಿನೇಶ್ ಚೆಂಗಪ್ಪ ಅವರ ಪತ್ನಿ ಆಶಾ ಕಾವೇರಮ್ಮ (53) ಕೊಲೆಯಾದ ಶಿಕ್ಷಕಿ. ಪೊನ್ನಂಪೇಟೆಯಲ್ಲಿ ವಾಸವಿದ್ದ ಬಲ್ಯಮುಂಡೂರು ಗ್ರಾಮದ ಮಾಚಿಮಾಡ ಜಗದೀಶ್ (67) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಶಿಕ್ಷಕಿ ಆಶಾ ಅವರ ಮನೆ ಸಮೀಪವಿರುವ ಮುಖ್ಯ ರಸ್ತೆಯ ಪೊಲೀಸ್ ಉಪಠಾಣೆ ಎದುರಿನಲ್ಲೇ ಘಟನೆ ನಡೆದಿತ್ತು. ಘಟನೆ ಸಂದರ್ಭ ಶಿಕ್ಷಕಿಯನ್ನು ರಕ್ಷಿಸಲು ಹೋದ ಬಾಳೆಲೆ ಕಾಲೇಜು ವಿದ್ಯಾರ್ಥಿ ದಿನೇಶ್ (17) ಹಾಗೂ ಪೆಮ್ಮು (45) ಅವರಿಗೂ ಗುಂಡು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ.

Advertisement

ಕೃತ್ಯ ನಡೆದ 25 ಮೀಟರ್ ದೂರದ ತೋಟದಲ್ಲಿ ಹಂತಕ ಜಗದೀಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೋವಿಯಿಂದ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ.  ಸಾಲ ಪಡೆದುಕೊಂಡ ವಿಚಾರದಲ್ಲಿ ಜಗದೀಶ್ ಅವರು ಆಶಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗದೀಶ್ ಜೈಲುವಾಸ ಕೂಡ ಅನುಭವಿಸಿದ್ದರು. ಇದೇ ಸೇಡು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸ್ ತನಿಖೆ ನಡೆಯುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |
March 23, 2024
11:10 PM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!
March 19, 2024
7:31 PM
by: ದ ರೂರಲ್ ಮಿರರ್.ಕಾಂ
ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ…..!
March 12, 2024
11:36 AM
by: ವಿವೇಕಾನಂದ ಎಚ್‌ ಕೆ
ಇವರನ್ನು ಬಿಸಿ ಬಿಸಿ ಎಣ್ಣೆಯಲ್ಲಿ ಕರಿದರಷ್ಟೇ ಸಾವಿರ ಸಾವಿರ ಹೆಣ್ಣು ಭ್ರೂಣಗಳಿಗೆ ಸಮಾಧಾನ | ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ ಪಾಪಿಗಳು |
November 28, 2023
1:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror