ಮಡಿಕೇರಿ: ಶಿಕ್ಷಕಿಯನ್ನು ಗುಂಡು ಹೊಡೆದು ಹತ್ಯೆಗೈದ ಕೊಲೆಗಾರ ಕೊನೆಗೆ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬಾಳೆಲೆಯಲ್ಲಿ ನಡೆದಿದ್ದು, ಈ ಕೊಲೆಗೆ ಕಾರಣ ನಿಗೂಢವಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.
ಕಳತ್ಮಾಡು ಲಯನ್ಸ್ ಪ್ರೌಢಶಾಲೆ ಶಿಕ್ಷಕಿ, ಬಾಳೆಲೆ ಗ್ರಾಮದ ದಿ. ಆದೇಂಗಡ ದಿನೇಶ್ ಚೆಂಗಪ್ಪ ಅವರ ಪತ್ನಿ ಆಶಾ ಕಾವೇರಮ್ಮ (53) ಕೊಲೆಯಾದ ಶಿಕ್ಷಕಿ. ಪೊನ್ನಂಪೇಟೆಯಲ್ಲಿ ವಾಸವಿದ್ದ ಬಲ್ಯಮುಂಡೂರು ಗ್ರಾಮದ ಮಾಚಿಮಾಡ ಜಗದೀಶ್ (67) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಶಿಕ್ಷಕಿ ಆಶಾ ಅವರ ಮನೆ ಸಮೀಪವಿರುವ ಮುಖ್ಯ ರಸ್ತೆಯ ಪೊಲೀಸ್ ಉಪಠಾಣೆ ಎದುರಿನಲ್ಲೇ ಘಟನೆ ನಡೆದಿತ್ತು. ಘಟನೆ ಸಂದರ್ಭ ಶಿಕ್ಷಕಿಯನ್ನು ರಕ್ಷಿಸಲು ಹೋದ ಬಾಳೆಲೆ ಕಾಲೇಜು ವಿದ್ಯಾರ್ಥಿ ದಿನೇಶ್ (17) ಹಾಗೂ ಪೆಮ್ಮು (45) ಅವರಿಗೂ ಗುಂಡು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಕೃತ್ಯ ನಡೆದ 25 ಮೀಟರ್ ದೂರದ ತೋಟದಲ್ಲಿ ಹಂತಕ ಜಗದೀಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೋವಿಯಿಂದ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ. ಸಾಲ ಪಡೆದುಕೊಂಡ ವಿಚಾರದಲ್ಲಿ ಜಗದೀಶ್ ಅವರು ಆಶಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗದೀಶ್ ಜೈಲುವಾಸ ಕೂಡ ಅನುಭವಿಸಿದ್ದರು. ಇದೇ ಸೇಡು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸ್ ತನಿಖೆ ನಡೆಯುತ್ತಿದೆ.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…