Advertisement
ಅಪರಾಧ

ಶಾಲಾ ಶಿಕ್ಷಕಿಯ ಕೊಲೆಗೆ ಕಾರಣ ನಿಗೂಢ…!

Share

ಮಡಿಕೇರಿ:  ಶಿಕ್ಷಕಿಯನ್ನು ಗುಂಡು ಹೊಡೆದು ಹತ್ಯೆಗೈದ ಕೊಲೆಗಾರ ಕೊನೆಗೆ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬಾಳೆಲೆಯಲ್ಲಿ ನಡೆದಿದ್ದು, ಈ ಕೊಲೆಗೆ ಕಾರಣ ನಿಗೂಢವಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.

ಕಳತ್ಮಾಡು ಲಯನ್ಸ್ ಪ್ರೌಢಶಾಲೆ ಶಿಕ್ಷಕಿ, ಬಾಳೆಲೆ ಗ್ರಾಮದ ದಿ. ಆದೇಂಗಡ ದಿನೇಶ್ ಚೆಂಗಪ್ಪ ಅವರ ಪತ್ನಿ ಆಶಾ ಕಾವೇರಮ್ಮ (53) ಕೊಲೆಯಾದ ಶಿಕ್ಷಕಿ. ಪೊನ್ನಂಪೇಟೆಯಲ್ಲಿ ವಾಸವಿದ್ದ ಬಲ್ಯಮುಂಡೂರು ಗ್ರಾಮದ ಮಾಚಿಮಾಡ ಜಗದೀಶ್ (67) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಶಿಕ್ಷಕಿ ಆಶಾ ಅವರ ಮನೆ ಸಮೀಪವಿರುವ ಮುಖ್ಯ ರಸ್ತೆಯ ಪೊಲೀಸ್ ಉಪಠಾಣೆ ಎದುರಿನಲ್ಲೇ ಘಟನೆ ನಡೆದಿತ್ತು. ಘಟನೆ ಸಂದರ್ಭ ಶಿಕ್ಷಕಿಯನ್ನು ರಕ್ಷಿಸಲು ಹೋದ ಬಾಳೆಲೆ ಕಾಲೇಜು ವಿದ್ಯಾರ್ಥಿ ದಿನೇಶ್ (17) ಹಾಗೂ ಪೆಮ್ಮು (45) ಅವರಿಗೂ ಗುಂಡು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕೃತ್ಯ ನಡೆದ 25 ಮೀಟರ್ ದೂರದ ತೋಟದಲ್ಲಿ ಹಂತಕ ಜಗದೀಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೋವಿಯಿಂದ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ.  ಸಾಲ ಪಡೆದುಕೊಂಡ ವಿಚಾರದಲ್ಲಿ ಜಗದೀಶ್ ಅವರು ಆಶಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗದೀಶ್ ಜೈಲುವಾಸ ಕೂಡ ಅನುಭವಿಸಿದ್ದರು. ಇದೇ ಸೇಡು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸ್ ತನಿಖೆ ನಡೆಯುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

5 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

5 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

13 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

21 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

1 day ago