ಮಡಿಕೇರಿ: ಶಿಕ್ಷಕಿಯನ್ನು ಗುಂಡು ಹೊಡೆದು ಹತ್ಯೆಗೈದ ಕೊಲೆಗಾರ ಕೊನೆಗೆ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬಾಳೆಲೆಯಲ್ಲಿ ನಡೆದಿದ್ದು, ಈ ಕೊಲೆಗೆ ಕಾರಣ ನಿಗೂಢವಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.
ಕಳತ್ಮಾಡು ಲಯನ್ಸ್ ಪ್ರೌಢಶಾಲೆ ಶಿಕ್ಷಕಿ, ಬಾಳೆಲೆ ಗ್ರಾಮದ ದಿ. ಆದೇಂಗಡ ದಿನೇಶ್ ಚೆಂಗಪ್ಪ ಅವರ ಪತ್ನಿ ಆಶಾ ಕಾವೇರಮ್ಮ (53) ಕೊಲೆಯಾದ ಶಿಕ್ಷಕಿ. ಪೊನ್ನಂಪೇಟೆಯಲ್ಲಿ ವಾಸವಿದ್ದ ಬಲ್ಯಮುಂಡೂರು ಗ್ರಾಮದ ಮಾಚಿಮಾಡ ಜಗದೀಶ್ (67) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಶಿಕ್ಷಕಿ ಆಶಾ ಅವರ ಮನೆ ಸಮೀಪವಿರುವ ಮುಖ್ಯ ರಸ್ತೆಯ ಪೊಲೀಸ್ ಉಪಠಾಣೆ ಎದುರಿನಲ್ಲೇ ಘಟನೆ ನಡೆದಿತ್ತು. ಘಟನೆ ಸಂದರ್ಭ ಶಿಕ್ಷಕಿಯನ್ನು ರಕ್ಷಿಸಲು ಹೋದ ಬಾಳೆಲೆ ಕಾಲೇಜು ವಿದ್ಯಾರ್ಥಿ ದಿನೇಶ್ (17) ಹಾಗೂ ಪೆಮ್ಮು (45) ಅವರಿಗೂ ಗುಂಡು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಕೃತ್ಯ ನಡೆದ 25 ಮೀಟರ್ ದೂರದ ತೋಟದಲ್ಲಿ ಹಂತಕ ಜಗದೀಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೋವಿಯಿಂದ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ. ಸಾಲ ಪಡೆದುಕೊಂಡ ವಿಚಾರದಲ್ಲಿ ಜಗದೀಶ್ ಅವರು ಆಶಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗದೀಶ್ ಜೈಲುವಾಸ ಕೂಡ ಅನುಭವಿಸಿದ್ದರು. ಇದೇ ಸೇಡು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸ್ ತನಿಖೆ ನಡೆಯುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…