Advertisement
ಅಪರಾಧ

ಶಾಲಾ ಶಿಕ್ಷಕಿಯ ಕೊಲೆಗೆ ಕಾರಣ ನಿಗೂಢ…!

Share

ಮಡಿಕೇರಿ:  ಶಿಕ್ಷಕಿಯನ್ನು ಗುಂಡು ಹೊಡೆದು ಹತ್ಯೆಗೈದ ಕೊಲೆಗಾರ ಕೊನೆಗೆ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬಾಳೆಲೆಯಲ್ಲಿ ನಡೆದಿದ್ದು, ಈ ಕೊಲೆಗೆ ಕಾರಣ ನಿಗೂಢವಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.

ಕಳತ್ಮಾಡು ಲಯನ್ಸ್ ಪ್ರೌಢಶಾಲೆ ಶಿಕ್ಷಕಿ, ಬಾಳೆಲೆ ಗ್ರಾಮದ ದಿ. ಆದೇಂಗಡ ದಿನೇಶ್ ಚೆಂಗಪ್ಪ ಅವರ ಪತ್ನಿ ಆಶಾ ಕಾವೇರಮ್ಮ (53) ಕೊಲೆಯಾದ ಶಿಕ್ಷಕಿ. ಪೊನ್ನಂಪೇಟೆಯಲ್ಲಿ ವಾಸವಿದ್ದ ಬಲ್ಯಮುಂಡೂರು ಗ್ರಾಮದ ಮಾಚಿಮಾಡ ಜಗದೀಶ್ (67) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಶಿಕ್ಷಕಿ ಆಶಾ ಅವರ ಮನೆ ಸಮೀಪವಿರುವ ಮುಖ್ಯ ರಸ್ತೆಯ ಪೊಲೀಸ್ ಉಪಠಾಣೆ ಎದುರಿನಲ್ಲೇ ಘಟನೆ ನಡೆದಿತ್ತು. ಘಟನೆ ಸಂದರ್ಭ ಶಿಕ್ಷಕಿಯನ್ನು ರಕ್ಷಿಸಲು ಹೋದ ಬಾಳೆಲೆ ಕಾಲೇಜು ವಿದ್ಯಾರ್ಥಿ ದಿನೇಶ್ (17) ಹಾಗೂ ಪೆಮ್ಮು (45) ಅವರಿಗೂ ಗುಂಡು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕೃತ್ಯ ನಡೆದ 25 ಮೀಟರ್ ದೂರದ ತೋಟದಲ್ಲಿ ಹಂತಕ ಜಗದೀಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೋವಿಯಿಂದ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ.  ಸಾಲ ಪಡೆದುಕೊಂಡ ವಿಚಾರದಲ್ಲಿ ಜಗದೀಶ್ ಅವರು ಆಶಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗದೀಶ್ ಜೈಲುವಾಸ ಕೂಡ ಅನುಭವಿಸಿದ್ದರು. ಇದೇ ಸೇಡು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸ್ ತನಿಖೆ ನಡೆಯುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

3 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

4 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

4 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

9 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago