ಮಡಿಕೇರಿ: ಶಿಕ್ಷಕಿಯನ್ನು ಗುಂಡು ಹೊಡೆದು ಹತ್ಯೆಗೈದ ಕೊಲೆಗಾರ ಕೊನೆಗೆ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬಾಳೆಲೆಯಲ್ಲಿ ನಡೆದಿದ್ದು, ಈ ಕೊಲೆಗೆ ಕಾರಣ ನಿಗೂಢವಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.
ಕಳತ್ಮಾಡು ಲಯನ್ಸ್ ಪ್ರೌಢಶಾಲೆ ಶಿಕ್ಷಕಿ, ಬಾಳೆಲೆ ಗ್ರಾಮದ ದಿ. ಆದೇಂಗಡ ದಿನೇಶ್ ಚೆಂಗಪ್ಪ ಅವರ ಪತ್ನಿ ಆಶಾ ಕಾವೇರಮ್ಮ (53) ಕೊಲೆಯಾದ ಶಿಕ್ಷಕಿ. ಪೊನ್ನಂಪೇಟೆಯಲ್ಲಿ ವಾಸವಿದ್ದ ಬಲ್ಯಮುಂಡೂರು ಗ್ರಾಮದ ಮಾಚಿಮಾಡ ಜಗದೀಶ್ (67) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಶಿಕ್ಷಕಿ ಆಶಾ ಅವರ ಮನೆ ಸಮೀಪವಿರುವ ಮುಖ್ಯ ರಸ್ತೆಯ ಪೊಲೀಸ್ ಉಪಠಾಣೆ ಎದುರಿನಲ್ಲೇ ಘಟನೆ ನಡೆದಿತ್ತು. ಘಟನೆ ಸಂದರ್ಭ ಶಿಕ್ಷಕಿಯನ್ನು ರಕ್ಷಿಸಲು ಹೋದ ಬಾಳೆಲೆ ಕಾಲೇಜು ವಿದ್ಯಾರ್ಥಿ ದಿನೇಶ್ (17) ಹಾಗೂ ಪೆಮ್ಮು (45) ಅವರಿಗೂ ಗುಂಡು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಕೃತ್ಯ ನಡೆದ 25 ಮೀಟರ್ ದೂರದ ತೋಟದಲ್ಲಿ ಹಂತಕ ಜಗದೀಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೋವಿಯಿಂದ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ. ಸಾಲ ಪಡೆದುಕೊಂಡ ವಿಚಾರದಲ್ಲಿ ಜಗದೀಶ್ ಅವರು ಆಶಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗದೀಶ್ ಜೈಲುವಾಸ ಕೂಡ ಅನುಭವಿಸಿದ್ದರು. ಇದೇ ಸೇಡು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸ್ ತನಿಖೆ ನಡೆಯುತ್ತಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…