Advertisement
ಅಪರಾಧ

ಶಾಲಾ ಶಿಕ್ಷಕಿಯ ಕೊಲೆಗೆ ಕಾರಣ ನಿಗೂಢ…!

Share

ಮಡಿಕೇರಿ:  ಶಿಕ್ಷಕಿಯನ್ನು ಗುಂಡು ಹೊಡೆದು ಹತ್ಯೆಗೈದ ಕೊಲೆಗಾರ ಕೊನೆಗೆ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬಾಳೆಲೆಯಲ್ಲಿ ನಡೆದಿದ್ದು, ಈ ಕೊಲೆಗೆ ಕಾರಣ ನಿಗೂಢವಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.

ಕಳತ್ಮಾಡು ಲಯನ್ಸ್ ಪ್ರೌಢಶಾಲೆ ಶಿಕ್ಷಕಿ, ಬಾಳೆಲೆ ಗ್ರಾಮದ ದಿ. ಆದೇಂಗಡ ದಿನೇಶ್ ಚೆಂಗಪ್ಪ ಅವರ ಪತ್ನಿ ಆಶಾ ಕಾವೇರಮ್ಮ (53) ಕೊಲೆಯಾದ ಶಿಕ್ಷಕಿ. ಪೊನ್ನಂಪೇಟೆಯಲ್ಲಿ ವಾಸವಿದ್ದ ಬಲ್ಯಮುಂಡೂರು ಗ್ರಾಮದ ಮಾಚಿಮಾಡ ಜಗದೀಶ್ (67) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಶಿಕ್ಷಕಿ ಆಶಾ ಅವರ ಮನೆ ಸಮೀಪವಿರುವ ಮುಖ್ಯ ರಸ್ತೆಯ ಪೊಲೀಸ್ ಉಪಠಾಣೆ ಎದುರಿನಲ್ಲೇ ಘಟನೆ ನಡೆದಿತ್ತು. ಘಟನೆ ಸಂದರ್ಭ ಶಿಕ್ಷಕಿಯನ್ನು ರಕ್ಷಿಸಲು ಹೋದ ಬಾಳೆಲೆ ಕಾಲೇಜು ವಿದ್ಯಾರ್ಥಿ ದಿನೇಶ್ (17) ಹಾಗೂ ಪೆಮ್ಮು (45) ಅವರಿಗೂ ಗುಂಡು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕೃತ್ಯ ನಡೆದ 25 ಮೀಟರ್ ದೂರದ ತೋಟದಲ್ಲಿ ಹಂತಕ ಜಗದೀಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೋವಿಯಿಂದ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ.  ಸಾಲ ಪಡೆದುಕೊಂಡ ವಿಚಾರದಲ್ಲಿ ಜಗದೀಶ್ ಅವರು ಆಶಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗದೀಶ್ ಜೈಲುವಾಸ ಕೂಡ ಅನುಭವಿಸಿದ್ದರು. ಇದೇ ಸೇಡು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸ್ ತನಿಖೆ ನಡೆಯುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

3 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

5 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

11 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

21 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

21 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago