ಮಡಿಕೇರಿ: ಶಿಕ್ಷಕಿಯನ್ನು ಗುಂಡು ಹೊಡೆದು ಹತ್ಯೆಗೈದ ಕೊಲೆಗಾರ ಕೊನೆಗೆ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬಾಳೆಲೆಯಲ್ಲಿ ನಡೆದಿದ್ದು, ಈ ಕೊಲೆಗೆ ಕಾರಣ ನಿಗೂಢವಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.
ಕಳತ್ಮಾಡು ಲಯನ್ಸ್ ಪ್ರೌಢಶಾಲೆ ಶಿಕ್ಷಕಿ, ಬಾಳೆಲೆ ಗ್ರಾಮದ ದಿ. ಆದೇಂಗಡ ದಿನೇಶ್ ಚೆಂಗಪ್ಪ ಅವರ ಪತ್ನಿ ಆಶಾ ಕಾವೇರಮ್ಮ (53) ಕೊಲೆಯಾದ ಶಿಕ್ಷಕಿ. ಪೊನ್ನಂಪೇಟೆಯಲ್ಲಿ ವಾಸವಿದ್ದ ಬಲ್ಯಮುಂಡೂರು ಗ್ರಾಮದ ಮಾಚಿಮಾಡ ಜಗದೀಶ್ (67) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಶಿಕ್ಷಕಿ ಆಶಾ ಅವರ ಮನೆ ಸಮೀಪವಿರುವ ಮುಖ್ಯ ರಸ್ತೆಯ ಪೊಲೀಸ್ ಉಪಠಾಣೆ ಎದುರಿನಲ್ಲೇ ಘಟನೆ ನಡೆದಿತ್ತು. ಘಟನೆ ಸಂದರ್ಭ ಶಿಕ್ಷಕಿಯನ್ನು ರಕ್ಷಿಸಲು ಹೋದ ಬಾಳೆಲೆ ಕಾಲೇಜು ವಿದ್ಯಾರ್ಥಿ ದಿನೇಶ್ (17) ಹಾಗೂ ಪೆಮ್ಮು (45) ಅವರಿಗೂ ಗುಂಡು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಕೃತ್ಯ ನಡೆದ 25 ಮೀಟರ್ ದೂರದ ತೋಟದಲ್ಲಿ ಹಂತಕ ಜಗದೀಶ್ ಅವರ ಮೃತದೇಹ ಪತ್ತೆಯಾಗಿದ್ದು, ಕೋವಿಯಿಂದ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ. ಸಾಲ ಪಡೆದುಕೊಂಡ ವಿಚಾರದಲ್ಲಿ ಜಗದೀಶ್ ಅವರು ಆಶಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಗದೀಶ್ ಜೈಲುವಾಸ ಕೂಡ ಅನುಭವಿಸಿದ್ದರು. ಇದೇ ಸೇಡು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸ್ ತನಿಖೆ ನಡೆಯುತ್ತಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…