ಶಾಲೆಗಳಲ್ಲಿ “ವಾಟರ್ ಬೆಲ್” ಕಡೆಗೆ ಆಸಕ್ತರಾದ ಶಿಕ್ಷಣ ಸಚಿವರು

November 13, 2019
8:58 PM

ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯದ ಕಡೆಗೆ ರಾಜ್ಯದ ಶಿಕ್ಷಣ ಸಚಿವರು ಕಾಳಜಿ ವಹಿಸಿದ್ದಾರೆ. ಈಗಾಗಲೇ ಕೇರಳ ಹಾಗೂ ರಾಜ್ಯದ ಕೆಲವು ಶಾಲೆಗಳಲ್ಲಿ ಅನುಷ್ಟಾನ ಮಾಡಿರುವ “ವಾಟರ್ ಬೆಲ್” ಎಲ್ಲಾ ಶಾಲೆಗಳಲ್ಲೂ ಜಾರಿ ಮಾಡುವತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತರಾಗಿದ್ದು , ಶಿಕ್ಷಣ  ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Advertisement
Advertisement
Advertisement

 

Advertisement

ಕೇರಳದಲ್ಲಿ  ಈ ಯೋಜನೆ ಈಗಾಗಲೇ ಜಾರಿಯಾಗಿದೆ. ಶಾಲಾ ಮಕ್ಕಳು ಕಡ್ಡಾಯವಾಗಿ ಮೂರು ಬಾರಿ ನೀರು  ಕುಡಿಯುವ ಯೋಜನೆ ಇದು. ಶಾಲೆಯಲ್ಲಿ ನೀರು ಕುಡಿಯಲೆಂದೇ ಬೆಲ್ ಕೊಡಲಾಗುತ್ತದೆ. ಈ ಸಂದರ್ಭ ಮಕ್ಕಳು ನೀರು ಕುಡಿಯಬೇಕು. ಇದು ಯೋಜನೆಯ ಸಂಕ್ಷಿಪ್ತ ರೂಪ. ಪ್ಲಾಸ್ಟಿಕ್ ರಹಿತವಾದ ಬಾಟಲಿಯಲ್ಲಿಯೇ ಮಕ್ಕಳು ಶಾಲೆಗೆ ನೀರು ತರಬೇಕು. ಕೇರಳದಲ್ಲಿ ಈ ಯೋಜನೆ ಯಶಸ್ವಿಯಾಗಿದೆ.

Advertisement

ಮೊದಲು ಕೇರಳದ ತಿರುವನಂತಪುರಂನ ಗ್ರೀನ್ ಡೋಮ್ ಪಬ್ಲಿಕ್ ಶಾಲೆ ಈ ವರ್ಷದ ಆರಂಭದಲ್ಲಿ ‘ವಾಟರ್ ಬೆಲ್’ ಯೋಜನೆಯಂತೆ ನೀರು ಕುಡಿಯಲು ನಿರ್ದಿಷ್ಟ ಅವಧಿಯಲ್ಲಿ ವಿಶೇಷ ವಿರಾಮದ ಸಮಯ ನೀಡುವುದು ಈ ಯೋಜನೆ ಉದ್ದೇಶ.

ರಾಜ್ಯದ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಇಂದ್ರಪ್ರಸ್ಥ ಶಾಲೆಯಲ್ಲಿ,  ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ  ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಸುಳ್ಯ ತಾಲೂಕಿನ ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಸಲಹೆ ನೀಡಲಾಗಿದೆ. ಹೀಗಾಗಿ ಇಲ್ಲೂ ಮಕ್ಕಳು ಸಾಕಷ್ಟು ನೀರು ಕುಡಿಯುತ್ತಾರೆ.

Advertisement

ಇದೀಗ ವಾಟರ್ ಬೆಲ್ ಯೋಜನೆಯ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತಿ ವಹಿಸಿ  ರಾಜ್ಯದಲ್ಲೂ ಈ ಯೋಜನೆ ಜಾರಿಯಾಗಬೇಕು ಎಂದು ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದು ರಾಜ್ಯದ ಶಾಲೆಗಳಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಕುರಿತು ಯೋಚಿಸಿ ಕಾರ್ಯಕ್ರಮ ರೂಪಿಸಬೇಕೆಂದು ನಮ್ಮ ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಅವರು  ಟ್ವಿಟ್ಟರ್ ನಲ್ಲಿ  ಬರೆದಿದ್ದಾರೆ.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror