ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯದ ಕಡೆಗೆ ರಾಜ್ಯದ ಶಿಕ್ಷಣ ಸಚಿವರು ಕಾಳಜಿ ವಹಿಸಿದ್ದಾರೆ. ಈಗಾಗಲೇ ಕೇರಳ ಹಾಗೂ ರಾಜ್ಯದ ಕೆಲವು ಶಾಲೆಗಳಲ್ಲಿ ಅನುಷ್ಟಾನ ಮಾಡಿರುವ “ವಾಟರ್ ಬೆಲ್” ಎಲ್ಲಾ ಶಾಲೆಗಳಲ್ಲೂ ಜಾರಿ ಮಾಡುವತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತರಾಗಿದ್ದು , ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೇರಳದಲ್ಲಿ ಈ ಯೋಜನೆ ಈಗಾಗಲೇ ಜಾರಿಯಾಗಿದೆ. ಶಾಲಾ ಮಕ್ಕಳು ಕಡ್ಡಾಯವಾಗಿ ಮೂರು ಬಾರಿ ನೀರು ಕುಡಿಯುವ ಯೋಜನೆ ಇದು. ಶಾಲೆಯಲ್ಲಿ ನೀರು ಕುಡಿಯಲೆಂದೇ ಬೆಲ್ ಕೊಡಲಾಗುತ್ತದೆ. ಈ ಸಂದರ್ಭ ಮಕ್ಕಳು ನೀರು ಕುಡಿಯಬೇಕು. ಇದು ಯೋಜನೆಯ ಸಂಕ್ಷಿಪ್ತ ರೂಪ. ಪ್ಲಾಸ್ಟಿಕ್ ರಹಿತವಾದ ಬಾಟಲಿಯಲ್ಲಿಯೇ ಮಕ್ಕಳು ಶಾಲೆಗೆ ನೀರು ತರಬೇಕು. ಕೇರಳದಲ್ಲಿ ಈ ಯೋಜನೆ ಯಶಸ್ವಿಯಾಗಿದೆ.
ಮೊದಲು ಕೇರಳದ ತಿರುವನಂತಪುರಂನ ಗ್ರೀನ್ ಡೋಮ್ ಪಬ್ಲಿಕ್ ಶಾಲೆ ಈ ವರ್ಷದ ಆರಂಭದಲ್ಲಿ ‘ವಾಟರ್ ಬೆಲ್’ ಯೋಜನೆಯಂತೆ ನೀರು ಕುಡಿಯಲು ನಿರ್ದಿಷ್ಟ ಅವಧಿಯಲ್ಲಿ ವಿಶೇಷ ವಿರಾಮದ ಸಮಯ ನೀಡುವುದು ಈ ಯೋಜನೆ ಉದ್ದೇಶ.
ರಾಜ್ಯದ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಇಂದ್ರಪ್ರಸ್ಥ ಶಾಲೆಯಲ್ಲಿ, ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಸುಳ್ಯ ತಾಲೂಕಿನ ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಸಲಹೆ ನೀಡಲಾಗಿದೆ. ಹೀಗಾಗಿ ಇಲ್ಲೂ ಮಕ್ಕಳು ಸಾಕಷ್ಟು ನೀರು ಕುಡಿಯುತ್ತಾರೆ.
ಇದೀಗ ವಾಟರ್ ಬೆಲ್ ಯೋಜನೆಯ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತಿ ವಹಿಸಿ ರಾಜ್ಯದಲ್ಲೂ ಈ ಯೋಜನೆ ಜಾರಿಯಾಗಬೇಕು ಎಂದು ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದು ರಾಜ್ಯದ ಶಾಲೆಗಳಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಕುರಿತು ಯೋಚಿಸಿ ಕಾರ್ಯಕ್ರಮ ರೂಪಿಸಬೇಕೆಂದು ನಮ್ಮ ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.