Advertisement
ಸುದ್ದಿಗಳು

ಶಾಲೆಗಳಲ್ಲಿ “ವಾಟರ್ ಬೆಲ್” ಕಡೆಗೆ ಆಸಕ್ತರಾದ ಶಿಕ್ಷಣ ಸಚಿವರು

Share

ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯದ ಕಡೆಗೆ ರಾಜ್ಯದ ಶಿಕ್ಷಣ ಸಚಿವರು ಕಾಳಜಿ ವಹಿಸಿದ್ದಾರೆ. ಈಗಾಗಲೇ ಕೇರಳ ಹಾಗೂ ರಾಜ್ಯದ ಕೆಲವು ಶಾಲೆಗಳಲ್ಲಿ ಅನುಷ್ಟಾನ ಮಾಡಿರುವ “ವಾಟರ್ ಬೆಲ್” ಎಲ್ಲಾ ಶಾಲೆಗಳಲ್ಲೂ ಜಾರಿ ಮಾಡುವತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತರಾಗಿದ್ದು , ಶಿಕ್ಷಣ  ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

 

ಕೇರಳದಲ್ಲಿ  ಈ ಯೋಜನೆ ಈಗಾಗಲೇ ಜಾರಿಯಾಗಿದೆ. ಶಾಲಾ ಮಕ್ಕಳು ಕಡ್ಡಾಯವಾಗಿ ಮೂರು ಬಾರಿ ನೀರು  ಕುಡಿಯುವ ಯೋಜನೆ ಇದು. ಶಾಲೆಯಲ್ಲಿ ನೀರು ಕುಡಿಯಲೆಂದೇ ಬೆಲ್ ಕೊಡಲಾಗುತ್ತದೆ. ಈ ಸಂದರ್ಭ ಮಕ್ಕಳು ನೀರು ಕುಡಿಯಬೇಕು. ಇದು ಯೋಜನೆಯ ಸಂಕ್ಷಿಪ್ತ ರೂಪ. ಪ್ಲಾಸ್ಟಿಕ್ ರಹಿತವಾದ ಬಾಟಲಿಯಲ್ಲಿಯೇ ಮಕ್ಕಳು ಶಾಲೆಗೆ ನೀರು ತರಬೇಕು. ಕೇರಳದಲ್ಲಿ ಈ ಯೋಜನೆ ಯಶಸ್ವಿಯಾಗಿದೆ.

ಮೊದಲು ಕೇರಳದ ತಿರುವನಂತಪುರಂನ ಗ್ರೀನ್ ಡೋಮ್ ಪಬ್ಲಿಕ್ ಶಾಲೆ ಈ ವರ್ಷದ ಆರಂಭದಲ್ಲಿ ‘ವಾಟರ್ ಬೆಲ್’ ಯೋಜನೆಯಂತೆ ನೀರು ಕುಡಿಯಲು ನಿರ್ದಿಷ್ಟ ಅವಧಿಯಲ್ಲಿ ವಿಶೇಷ ವಿರಾಮದ ಸಮಯ ನೀಡುವುದು ಈ ಯೋಜನೆ ಉದ್ದೇಶ.

ರಾಜ್ಯದ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಇಂದ್ರಪ್ರಸ್ಥ ಶಾಲೆಯಲ್ಲಿ,  ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ  ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಸುಳ್ಯ ತಾಲೂಕಿನ ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಸಲಹೆ ನೀಡಲಾಗಿದೆ. ಹೀಗಾಗಿ ಇಲ್ಲೂ ಮಕ್ಕಳು ಸಾಕಷ್ಟು ನೀರು ಕುಡಿಯುತ್ತಾರೆ.

ಇದೀಗ ವಾಟರ್ ಬೆಲ್ ಯೋಜನೆಯ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತಿ ವಹಿಸಿ  ರಾಜ್ಯದಲ್ಲೂ ಈ ಯೋಜನೆ ಜಾರಿಯಾಗಬೇಕು ಎಂದು ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದು ರಾಜ್ಯದ ಶಾಲೆಗಳಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಕುರಿತು ಯೋಚಿಸಿ ಕಾರ್ಯಕ್ರಮ ರೂಪಿಸಬೇಕೆಂದು ನಮ್ಮ ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಅವರು  ಟ್ವಿಟ್ಟರ್ ನಲ್ಲಿ  ಬರೆದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

42 minutes ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

5 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

5 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

15 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

16 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 days ago