Advertisement
ಸುದ್ದಿಗಳು

ಶಾಲೆಗಳಲ್ಲಿ “ವಾಟರ್ ಬೆಲ್” ಕಡೆಗೆ ಆಸಕ್ತರಾದ ಶಿಕ್ಷಣ ಸಚಿವರು

Share

ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯದ ಕಡೆಗೆ ರಾಜ್ಯದ ಶಿಕ್ಷಣ ಸಚಿವರು ಕಾಳಜಿ ವಹಿಸಿದ್ದಾರೆ. ಈಗಾಗಲೇ ಕೇರಳ ಹಾಗೂ ರಾಜ್ಯದ ಕೆಲವು ಶಾಲೆಗಳಲ್ಲಿ ಅನುಷ್ಟಾನ ಮಾಡಿರುವ “ವಾಟರ್ ಬೆಲ್” ಎಲ್ಲಾ ಶಾಲೆಗಳಲ್ಲೂ ಜಾರಿ ಮಾಡುವತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತರಾಗಿದ್ದು , ಶಿಕ್ಷಣ  ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

 

ಕೇರಳದಲ್ಲಿ  ಈ ಯೋಜನೆ ಈಗಾಗಲೇ ಜಾರಿಯಾಗಿದೆ. ಶಾಲಾ ಮಕ್ಕಳು ಕಡ್ಡಾಯವಾಗಿ ಮೂರು ಬಾರಿ ನೀರು  ಕುಡಿಯುವ ಯೋಜನೆ ಇದು. ಶಾಲೆಯಲ್ಲಿ ನೀರು ಕುಡಿಯಲೆಂದೇ ಬೆಲ್ ಕೊಡಲಾಗುತ್ತದೆ. ಈ ಸಂದರ್ಭ ಮಕ್ಕಳು ನೀರು ಕುಡಿಯಬೇಕು. ಇದು ಯೋಜನೆಯ ಸಂಕ್ಷಿಪ್ತ ರೂಪ. ಪ್ಲಾಸ್ಟಿಕ್ ರಹಿತವಾದ ಬಾಟಲಿಯಲ್ಲಿಯೇ ಮಕ್ಕಳು ಶಾಲೆಗೆ ನೀರು ತರಬೇಕು. ಕೇರಳದಲ್ಲಿ ಈ ಯೋಜನೆ ಯಶಸ್ವಿಯಾಗಿದೆ.

ಮೊದಲು ಕೇರಳದ ತಿರುವನಂತಪುರಂನ ಗ್ರೀನ್ ಡೋಮ್ ಪಬ್ಲಿಕ್ ಶಾಲೆ ಈ ವರ್ಷದ ಆರಂಭದಲ್ಲಿ ‘ವಾಟರ್ ಬೆಲ್’ ಯೋಜನೆಯಂತೆ ನೀರು ಕುಡಿಯಲು ನಿರ್ದಿಷ್ಟ ಅವಧಿಯಲ್ಲಿ ವಿಶೇಷ ವಿರಾಮದ ಸಮಯ ನೀಡುವುದು ಈ ಯೋಜನೆ ಉದ್ದೇಶ.

ರಾಜ್ಯದ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಇಂದ್ರಪ್ರಸ್ಥ ಶಾಲೆಯಲ್ಲಿ,  ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ  ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಸುಳ್ಯ ತಾಲೂಕಿನ ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಸಲಹೆ ನೀಡಲಾಗಿದೆ. ಹೀಗಾಗಿ ಇಲ್ಲೂ ಮಕ್ಕಳು ಸಾಕಷ್ಟು ನೀರು ಕುಡಿಯುತ್ತಾರೆ.

ಇದೀಗ ವಾಟರ್ ಬೆಲ್ ಯೋಜನೆಯ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತಿ ವಹಿಸಿ  ರಾಜ್ಯದಲ್ಲೂ ಈ ಯೋಜನೆ ಜಾರಿಯಾಗಬೇಕು ಎಂದು ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದು ರಾಜ್ಯದ ಶಾಲೆಗಳಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಕುರಿತು ಯೋಚಿಸಿ ಕಾರ್ಯಕ್ರಮ ರೂಪಿಸಬೇಕೆಂದು ನಮ್ಮ ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಅವರು  ಟ್ವಿಟ್ಟರ್ ನಲ್ಲಿ  ಬರೆದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago